alex Certify ಮಣ್ಣಿನಿಂದ ಮಾಡಿದ ಈ ವಸ್ತುಗಳು ಮನೆಯ ʼಸುಖ-ಸೌಭಾಗ್ಯʼ ಪ್ರಾಪ್ತಿಗೆ ಸಹಕಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಣ್ಣಿನಿಂದ ಮಾಡಿದ ಈ ವಸ್ತುಗಳು ಮನೆಯ ʼಸುಖ-ಸೌಭಾಗ್ಯʼ ಪ್ರಾಪ್ತಿಗೆ ಸಹಕಾರಿ

ಪ್ರಕೃತಿಯ ಅಮೂಲ್ಯ ಕೊಡುಗೆ ಮಣ್ಣು ಮಾನವನ ಜೀವನದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ ಇದ್ರ ಉಪಯೋಗದಿಂದ ಸುಖ-ಸೌಭಾಗ್ಯದ ಪ್ರಾಪ್ತಿಯಾಗುತ್ತದೆ. ಜ್ಯೋತಿಷ್ಯಶಾಸ್ತ್ರ ಹಾಗೂ ಗ್ರಂಥಗಳಲ್ಲಿಯೂ ಮಣ್ಣಿನ ಮಹತ್ವದ ಬಗ್ಗೆ ಹೇಳಲಾಗಿದೆ. ಮನೆಯಲ್ಲಿ ಮಣ್ಣಿನ ಪಾತ್ರೆಯಿದ್ದರೆ ಬುಧ ಹಾಗೂ ಚಂದ್ರನ ಆಶೀರ್ವಾದ ಸದಾ ಇರುತ್ತದೆ. ಮನೆಯಲ್ಲಿರುವ ಕೆಲವೊಂದು ಮಣ್ಣಿನ ವಸ್ತುಗಳು ಕುಟುಂಬದಲ್ಲಿ ಶಾಂತಿ, ಸಮೃದ್ಧಿ ನೆಲೆಸಲು ಸಹಕಾರಿ.

ಮಣ್ಣಿನ ಮಡಿಕೆಯಲ್ಲಿಟ್ಟ ನೀರನ್ನು ಕುಡಿಯುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ. ಮನೆಯಲ್ಲಿ ಸಕಾರಾತ್ಮಕ ಅಂಶ ನೆಲೆಸಿರುತ್ತದೆ.

ದೇವರ ಮನೆಯಲ್ಲಿ ಮಣ್ಣಿನಿಂದ ಮಾಡಿದ ಮೂರ್ತಿಯನ್ನಿಟ್ಟು ಪೂಜೆ ಮಾಡುವುದರಿಂದ ಮನೆಯಲ್ಲಿ ಆರ್ಥಿಕ ಸಮಸ್ಯೆ ಕಾಡುವುದಿಲ್ಲ.

ಮನೆಯ ವಾತಾವರಣವನ್ನು ಸಕಾರಾತ್ಮಕಗೊಳಿಸಲು ಮಣ್ಣಿನಿಂದ ಮಾಡಿದ ಪಕ್ಷಿಯ ಮೂರ್ತಿಯನ್ನು ಈಶಾನ್ಯ ದಿಕ್ಕಿನಲ್ಲಿಡಿ.

ಪ್ರತಿದಿನ ಶುದ್ಧ ಹಸುವಿನ ತುಪ್ಪ ಹಾಕಿ ಮಣ್ಣಿನಿಂದ ಮಾಡಿದ ಹಣತೆಯಲ್ಲಿ ದೀಪ ಹಚ್ಚಿ. ದೇವತೆಗಳ ಕೃಪೆ ಸದಾ ನೆಲೆಸಿರುತ್ತದೆ.

ಸಂಸಾರದಲ್ಲಿ ಸಮಸ್ಯೆ ಶುರುವಾಗಿದ್ದರೆ ತುಳಸಿ ಮುಂದೆ ಮಣ್ಣಿನ ಹಣತೆಯಲ್ಲಿ ದೀಪ ಹಚ್ಚಿ.

ಹಿಂದೂ ಧರ್ಮದ ಹಬ್ಬಗಳಲ್ಲಿ ಮನೆಯಲ್ಲಿ ಮಣ್ಣಿನ ಹಣತೆಯಲ್ಲಿ ದೀಪ ಹಚ್ಚುವುದು ಶ್ರೇಷ್ಠ.

ಮಣ್ಣಿನಿಂದ ಮಾಡಿದ ಲೋಟದಲ್ಲಿ ಟೀ, ಮಜ್ಜಿಗೆ, ಪಾನೀಯಗಳನ್ನು ಕುಡಿಯಿರಿ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...