alex Certify ‘ಡಿ ಬಾಸ್’ ಅಭಿಮಾನಿಗಳಿಗೆ ಸಂಭ್ರಮದ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಡಿ ಬಾಸ್’ ಅಭಿಮಾನಿಗಳಿಗೆ ಸಂಭ್ರಮದ ಸುದ್ದಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಐಎಫ್ಎಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಖ್ಯಾತ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಈ ಚಿತ್ರವನ್ನು ನಿರ್ದೇಶಿಸಲಿದ್ದಾರೆ.

ಅಂದ ಹಾಗೆ, ರಾಜೇಂದ್ರ ಸಿಂಗ್ ಬಾಬು ಮತ್ತು ದರ್ಶನ್ ಕಾಂಬಿನೇಷನ್ನಲ್ಲಿ ‘ರಾಜವೀರ ಮದಕರಿನಾಯಕ’ ಚಿತ್ರ ಸೆಟ್ಟೇರಿದೆ. ಈಗಾಗಲೇ ಮೊದಲ ಹಂತದ ಚಿತ್ರೀಕರಣ ನಡೆದಿದೆ. ಲಾಕ್ಡೌನ್ ಕಾರಣದಿಂದ ಐತಿಹಾಸಿಕ ಚಿತ್ರದ ನಿರ್ಮಾಣ ತಡವಾಗಬಹುದು ಎಂದು ಹೇಳಲಾಗಿದೆ.

ಇದೇ ವೇಳೆ ‘ಗಂಧದಗುಡಿ’ ಮಾದರಿಯ ಕಾಡಿನ ರಕ್ಷಣೆ, ವನ್ಯಜೀವಿ ಕುರಿತಾದ ಸಿನಿಮಾ ನಿರ್ಮಾಣಕ್ಕೆ ರಾಜೇಂದ್ರಸಿಂಗ್ ಬಾಬು ತಯಾರಿ ನಡೆಸಿದ್ದಾರೆ. ರಾಜೇಂದ್ರಸಿಂಗ್ ಬಾಬು ಅವರ ಮಹಾತ್ಮ ಪಿಚ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ 100ನೇ ಸಿನಿಮಾ ಇದಾಗಿದ್ದು 1947 ರಲ್ಲಿ ಸ್ಥಾಪನೆಯಾದ ಮಹಾತ್ಮ ಪಿಚ್ಚರ್ಸ್ 75 ವರ್ಷದ ಸಂಭ್ರಮದಲ್ಲಿದೆ. ಇದೇ ಸಂಭ್ರಮದಲ್ಲಿ 100ನೇ ಚಿತ್ರ ನಿರ್ಮಾಣ ಮಾಡಲಿದ್ದು, ದರ್ಶನ್ ಐಎಫ್ಎಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಲಾಕ್ ಡೌನ್ ಸಂದರ್ಭದಲ್ಲಿ ರಾಜೇಂದ್ರಸಿಂಗ್ ಬಾಬು ಇಂಗ್ಲಿಷ್ ಕಾದಂಬರಿ ಆಧರಿಸಿ ಕಥೆಯೊಂದನ್ನು ಸಿದ್ಧಪಡಿಸಿದ್ದು ಇದಕ್ಕೆ ದರ್ಶನ್ ಒಪ್ಪಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...