alex Certify ʼಮಕರ ಸಂಕ್ರಾಂತಿʼಯ ವಿಶೇಷವೇನು ಗೊತ್ತಾ….? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಮಕರ ಸಂಕ್ರಾಂತಿʼಯ ವಿಶೇಷವೇನು ಗೊತ್ತಾ….?

ಸುಗ್ಗಿ ಹಬ್ಬವಾಗಿರುವ ಸಂಕ್ರಾಂತಿಯನ್ನು ಜನ ಸಡಗರ-ಸಂಭ್ರಮದಿಂದ ಆಚರಿಸುತ್ತಾರೆ. ಗ್ರಾಮೀಣ ಭಾಗದಲ್ಲಿ ಎತ್ತುಗಳನ್ನು ಸಿಂಗರಿಸಿ ಮೆರವಣಿಗೆ ಮಾಡಲಾಗುತ್ತದೆ. ಕೊಯ್ಲು ಮುಗಿದು ಸುಗ್ಗಿ ಕಾಲ ಇದಾಗಿರುವುದರಿಂದ ಎಲ್ಲರೂ ಸಂಭ್ರಮದಿಂದ ಹಬ್ಬ ಆಚರಿಸುತ್ತಾರೆ.

ತಮಿಳುನಾಡಿನಲ್ಲಿ ಪೊಂಗಲ್ (ಸಂಕ್ರಾಂತಿ) ಹಬ್ಬವನ್ನು ವಿಶೇಷವಾಗಿ ಆಚರಿಸುತ್ತಾರೆ. ಮನೆಯ ಮುಂಭಾಗದಲ್ಲಿ ರಂಗೋಲಿ ಹಾಕಿ, ಒಲೆ ಹೂಡಿ ಹಾಲು ಉಕ್ಕಿಸುವುದು ವಾಡಿಕೆ. ಸಂಕ್ರಾಂತಿ ದಿನದಂದು ಸೂರ್ಯ ತನ್ನ ಪಥ ಬದಲಿಸುವುದರಿಂದ ಜೀವನದಲ್ಲಿ ಕೆಟ್ಟ ದಾರಿ ಬಿಟ್ಟು ಒಳ್ಳೆಯ ದಾರಿಯಲ್ಲಿ ಸಾಗಬೇಕೆಂಬುದು ಹಿರಿಯರ ನುಡಿಯಾಗಿದೆ.

ಎಳ್ಳು-ಬೆಲ್ಲ ತಿಂದು ಒಳ್ಳೆಯ ಮಾತನಾಡುವುದೇ ಮಕರ ಸಂಕ್ರಾಂತಿ ವಿಶೇಷವಾಗಿದೆ. ಎಲ್ಲ ದೇವಾಲಯಗಳಲ್ಲೂ ಮಕರ ಸಂಕ್ರಾಂತಿ ಪ್ರಯುಕ್ತ ವಿಶೇಷ ಪೂಜೆ ಪುನಸ್ಕಾರಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಎಲ್ಲ ದೇವಾಲಯಗಳಲ್ಲೂ ಕೂಡ ಧಾರ್ಮಿಕ ಚಟುವಟಿಕೆಗಳು ನಡೆಯುತ್ತವೆ. ಒಟ್ಟಾರೆ ಮಕರ ಸಂಕ್ರಾಂತಿ ಅಭಿವೃದ್ದಿಯ ಸಂಕೇತವಾಗಿದೆ. ಮನುಷ್ಯನ ಎಲ್ಲ ಕೆಟ್ಟ ಗುಣಗಳು ಅಳಿದು ಬಾಳುವ ಬದಲಾವಣೆಯ ಪರ್ವ ಕಾಲವೂ ಆಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...