alex Certify ವಿದ್ಯುತ್ ಅವಘಡಕ್ಕೆ ತಾಯಿ-ಮಗು ಬಲಿ : 25 ಲಕ್ಷ ರೂ.ಪರಿಹಾರ ನೀಡಲು ಆರ್.ಅಶೋಕ್ ಆಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯುತ್ ಅವಘಡಕ್ಕೆ ತಾಯಿ-ಮಗು ಬಲಿ : 25 ಲಕ್ಷ ರೂ.ಪರಿಹಾರ ನೀಡಲು ಆರ್.ಅಶೋಕ್ ಆಗ್ರಹ

ಬೆಂಗಳೂರು : ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ ಹಾಗೂ 9 ತಿಂಗಳ ಮಗು ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ 5 ಲಕ್ಷ ಪರಿಹಾರ ಘೋಷಿಸಿದೆ.

ಈ ಕುರಿತು ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯೆ ನೀಡಿದ್ದು, ಬರೀ ಅಧಿಕಾರಿಗಳನ್ನು ಅಮಾನತು ಮಾಡಿದರೆ ಆಗಲ್ಲ, 25 ಲಕ್ಷ ರೂ.ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.ಘಟನೆಗೆ ಸರ್ಕಾರ ನೇರ ಹೊಣೆ, ಬರೀ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ರೆ ಆಗಲ್ಲ. 25 ಲಕ್ಷ ರೂ.ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ವೈಟ್ ಫೀಲ್ಡ್ ನ ಕಾಡುಗೋಡಿಯಲ್ಲಿ ನಿನ್ನೆ ವಿದ್ಯುತ್ ತಂತಿ ತುಳಿದು ತಾಯಿ ಹಾಗೂ 9 ತಿಂಗಳ ಮಗು ಸಜೀವ ದಹನಗೊಂಡಿದ್ದರು. ಪ್ರಕರಣ ಸಂಬಂಧ ಐವರು ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಿ, ಬಂಧಿಸಿ ನಂತರ ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಲಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...