alex Certify ಶಾಲೆಗೆ ಗೈರು ಹಾಜರಾದ ಬಾಲಕ, ತಾಯಿ ಬೈದಿದ್ದಕ್ಕೆ ದುಡುಕಿನ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲೆಗೆ ಗೈರು ಹಾಜರಾದ ಬಾಲಕ, ತಾಯಿ ಬೈದಿದ್ದಕ್ಕೆ ದುಡುಕಿನ ನಿರ್ಧಾರ

ಬೆಂಗಳೂರು: ಶಾಲೆಗೆ ಗೈರು ಹಾಜರಾಗಿದ್ದರಿಂದ ತಾಯಿ ಬೈದಾಡಿದ್ದಕ್ಕೆ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರು ಉತ್ತರ ತಾಲೂಕಿನ ಕಡಬಗೆರೆ ಗ್ರಾಮದಲ್ಲಿ ಘಟನೆ ನಡೆದಿದೆ.

14 ವರ್ಷದ ಪೃಥ್ವಿರಾಜ್ ಮಾಡಿಕೊಂಡ ಬಾಲಕ. ಶಾಲೆಗೆ ಚಕ್ಕರ್ ಹಾಕಿದ್ದರಿಂದ ತಾಯಿ ಬೈದಾಡಿ ಒಂದೆರಡು ಏಟು ಕೊಟ್ಟಿದ್ದಾರೆ. ಇದರಿಂದ ಬಾಲಕ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಜಯಕುಮಾರ್, ಸವಿತಾ ದಂಪತಿಯ ಮಗನಾದ ಪೃಥ್ವಿರಾಜ್ ಕಡಬಗೆರೆ ಸರ್ಕಾರಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದ. ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾದನಾಯಕನಹಳ್ಳಿ ಠಾಣೆ ಪೋಲೀಸರು ಪರಿಶೀಲನೆ ನಡೆಸಿ ಕ್ರಮ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...