alex Certify BIG NEWS: ಸಂಪುಟ ವಿಸ್ತರಣೆ ವದಂತಿ ಬೆನ್ನಲ್ಲೇ ಅಮಿತ್‌ ಶಾ – ಬಿ.ಎಲ್.‌ ಸಂತೋಷ್‌ ಜೊತೆ ಪ್ರಧಾನಿ ಮೋದಿ ಮಹತ್ವದ ಚರ್ಚೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಂಪುಟ ವಿಸ್ತರಣೆ ವದಂತಿ ಬೆನ್ನಲ್ಲೇ ಅಮಿತ್‌ ಶಾ – ಬಿ.ಎಲ್.‌ ಸಂತೋಷ್‌ ಜೊತೆ ಪ್ರಧಾನಿ ಮೋದಿ ಮಹತ್ವದ ಚರ್ಚೆ

ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಪಕ್ಷದ ಹಿರಿಯ ನಾಯಕರಾದ ಅಮಿತ್​ ಶಾ, ಬಿ.ಎಲ್.​ ಸಂತೋಷ್​ ಜೊತೆ ಶನಿವಾರ ಹಾಗೂ ಭಾನುವಾರ ಗೌಪ್ಯ ಮಾತುಕತೆ ನಡೆಸಿದ್ದು ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಪ್ರಸ್ತುತ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿರುವ ಬಿ.ಎಲ್.​ ಸಂತೋಷ್​ 8 ವರ್ಷಗಳ ಕಾಲ ಕರ್ನಾಟಕದಲ್ಲಿ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಕೇಂದ್ರ ಗೃಹ ಸಚಿವರಾಗಿರುವ ಅಮಿತ್​ ಶಾ 2014 ರಿಂದ 2020ರವರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.

ಮೂಲಗಳ ಮಾಹಿತಿಯ ಪ್ರಕಾರ ಪ್ರಧಾನಿ ಮೋದಿ ಈ ವಾರ ತಮ್ಮ ಕ್ಯಾಬಿನೆಟ್​ ವಿಸ್ತರಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಬಗ್ಗೆ ಗೌಪ್ಯ ಮಾತುಕತೆ ನಡೆಸಿರುವ ಈ ಮೂವರು ಕೆಲವೊಂದಿಷ್ಟು ಸಂಸದರ ಹೆಸರನ್ನ ಗಣನೆಗೆ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗ್ತಿದೆ.

2019ರಲ್ಲಿ ಅಧಿಕಾರಕ್ಕೆ ಬಂದ ಬಳಿಕ ಮೋದಿ ಸರ್ಕಾರ ಮಾಡುತ್ತಿರುವ ಮೊದಲ ಕ್ಯಾಬಿನೆಟ್​ ವಿಸ್ತರಣೆ ಇದಾಗಿರಲಿದೆ. ಭಾನುವಾರ ಸಂಜೆ 5 ಗಂಟೆಗೆ ಆರಂಭವಾದ ಸಭೆ ಸುದೀರ್ಘ ಆರು ಗಂಟೆಗಳ ಕಾಲ ನಡೆದಿದೆ ಎನ್ನಲಾಗಿದೆ. ಹಾಗೂ ಶನಿವಾರ ಕೂಡ ತಡರಾತ್ರಿಯವರೆಗೂ ಚರ್ಚೆ ನಡೆದಿತ್ತು ಎಂದು ವರದಿಗಳು ತಿಳಿಸಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...