alex Certify ವಿದ್ಯುತ್ ಪ್ರವಹಿಸಿ ಘೋರ ದುರಂತ: ಕಂಬದ ಮೇಲೆಯೇ ಸಾವನ್ನಪ್ಪಿದ ಲೈನ್ ಮ್ಯಾನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯುತ್ ಪ್ರವಹಿಸಿ ಘೋರ ದುರಂತ: ಕಂಬದ ಮೇಲೆಯೇ ಸಾವನ್ನಪ್ಪಿದ ಲೈನ್ ಮ್ಯಾನ್

ಬೆಳಗಾವಿ: ವಿದ್ಯುತ್ ಪ್ರವಹಿಸಿ ಕಂಬದ ಮೇಲೆಯೇ ಲೈನ್ ಮ್ಯಾನ್ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷಕ್ಕೆ ಲೈನ್ ಮ್ಯಾನ್ ಮೃತಪಟ್ಟಿರುವ ಆರೋಪ ಕೇಳಿ ಬಂದಿದೆ. ಹುಲಿಕಟ್ಟಿ ಗ್ರಾಮದ ಪ್ರೇಮಾನಂದ(25) ಮೃತಪಟ್ಟವರು ಎನ್ನಲಾಗಿದೆ. ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಹುಲಿಕಟ್ಟೆ ಗ್ರಾಮದ ನಿವಾಸಿ ಪ್ರೇಮಾನಂದ ಅವರನ್ನು ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸದೆ ಅಧಿಕಾರಿಗಳು ಕಂಬದ ಮೇಲೆ ಹತ್ತಿಸಿದ್ದರು ಎಂದು ಪ್ರೇಮಾನಂದ ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲಾಸ್ಪತ್ರೆ ಬಳಿ ಜಮಾವಣೆಗೊಂಡ ಲೈನ್ ಮ್ಯಾನ್ ಪ್ರೇಮಾನಂದ ಕುಟುಂಬದವರು, ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...