alex Certify ಸಿಡಿ ಪ್ರಕರಣದ ಹಿಂದೆ ಇರೋದ್ಯಾರು ಗೊತ್ತಾ..? ಜಾರಕಿಹೊಳಿ ಸೋದರರಿಂದ ಮಹತ್ವದ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಡಿ ಪ್ರಕರಣದ ಹಿಂದೆ ಇರೋದ್ಯಾರು ಗೊತ್ತಾ..? ಜಾರಕಿಹೊಳಿ ಸೋದರರಿಂದ ಮಹತ್ವದ ನಿರ್ಧಾರ

ಬೆಂಗಳೂರು: ರಾಸಲೀಲೆ ಸಿಡಿ ಕೇಸ್ ನಲ್ಲಿ ಐವರನ್ನು ವಶಕ್ಕೆ ಪಡೆದು ಎಸ್ಐಟಿ ವಿಚಾರಣೆ ನಡೆಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ, ರಮೇಶ್ ಜೊತೆಗೆ ನಿನ್ನೆ ಚರ್ಚೆ ಮಾಡಿದ್ದು, ಆದಷ್ಟು ಬೇಗನೆ ದೂರು ನೀಡುವ ಬಗ್ಗೆ ಚಿಂತನೆ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ.

ಸೋಮವಾರದ ನಂತರ ಇಬ್ಬರು ಇಲ್ಲವೇ ಮೂವರ ವಿರುದ್ಧ ದೂರು ನೀಡುತ್ತೇವೆ. ತಿಮಿಂಗಿಲಗಳ ಬಗ್ಗೆ ನಾವು ಆದಷ್ಟು ಬೇಗ ದೂರು ಕೊಡುತ್ತೇವೆ. ತಿಮಿಂಗಿಲಗಳಿಗೆ ಸಹಕಾರ ನೀಡಿದವರನ್ನು ವಶಕ್ಕೆ ಪಡೆಯಲಾಗಿದೆ. ದೊಡ್ಡ ತಿಮಿಂಗಿಲಗಳನ್ನೂ ಇನ್ನು ವಶಕ್ಕೆ ಪಡೆದಿಲ್ಲ. ಆರೋಪಿಗಳಿಗೆ ಬುದ್ಧಿ ಕಲಿಸಬೇಕಾದರೆ ಎಲ್ಲರನ್ನೂ ಬಂಧಿಸಬೇಕು ಎಂದು ಹೇಳಿದ್ದಾರೆ.

ಸಾಕ್ಷಾಧಾರಗಳನ್ನು ಸಂಗ್ರಹ ಮಾಡಲಾಗುತ್ತಿದೆ. ನಾವು ಗಾಳಿಯಲ್ಲಿ ಗುಂಡು ಹೊಡೆಯಲ್ಲ, ಪಕ್ಕಾ ಎವಿಡೆನ್ಸ್ ಕಲೆಕ್ಟ್ ಮಾಡಿ ಕೊಡುತ್ತೇವೆ. ಯುವತಿ ಜೊತೆಗಿರುವ ಫೋಟೋ ನಮಗೆ ಲಭ್ಯವಾಗಿದ್ದು, ನಾವು ಕಾನೂನು ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...