alex Certify ಶಿವಮೊಗ್ಗದಲ್ಲಿ ಮಳೆ ಅಬ್ಬರಕ್ಕೆ ತತ್ತರಿಸಿದ ಜನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗದಲ್ಲಿ ಮಳೆ ಅಬ್ಬರಕ್ಕೆ ತತ್ತರಿಸಿದ ಜನ

ಶಿವಮೊಗ್ಗ: ನಗರದ ಹಲವೆಡೆ ಮಂಗಳವಾರ ಸಂಜೆ ಧಾರಾಕಾರ ಮಳೆಯಾಗಿದೆ. ಭಾರಿ ಗಾಳಿ ಆರ್ಭಟದೊಂದಿಗೆ ಮಳೆಯಾಗಿದ್ದು ತಗ್ಗು ಪ್ರದೇಶದ ಹಲವು ಮನೆಗಳಿಗೆ ನೀರು ನುಗ್ಗಿದೆ.

ಶಿವಮೊಗ್ಗದ ವೀರಣ್ಣ ಲೇಔಟ್ 4ನೇ ತಿರುವಿನಲ್ಲಿ ತೆಂಗಿನ ಮರ ಬಿದ್ದು ಮನೆ ಬಳಿ ನಿಲ್ಲಿಸಿದ್ದ ನಾಲ್ಕು ಬೈಕ್ ಜಖಂಗೊಂಡಿವೆ. ವಿದ್ಯುತ್ ಕಂಬ ಮುರಿದು ಬಿದ್ದಿದೆ. ಶಿವಮೊಗ್ಗ ಗ್ಯಾಸ್ ಏಜೆನ್ಸಿ ಬಳಿ ರಾಜಕಾಲುವೆ ನೀರು ತುಂಬಿ ಹರಿದು ತಗ್ಗು ಪ್ರದೇಶದ ಮನೆಗಳಿಗೆ ನುಗ್ಗಿದೆ.

ಮನೆಗೆ ನುಗ್ಗಿದ ನೀರು ಹೊರಹಾಕುವಲ್ಲಿ ನಿವಾಸಿಗಳು ಹೈರಾಣಾಗಿದ್ದಾರೆ. ರಸ್ತೆಯಲ್ಲಿಯೂ ಎರಡು ಅಡಿಗಳಷ್ಟು ನೀರು ಹರಿದಿದೆ. ಶಿವಮೊಗ್ಗ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಮಂಗಳವಾರ ಸಂಜೆ ಸುಮಾರಿಗೆ ಮೋಡಗಳು ದಟ್ಟೈಸಿ ಭಾರಿ ಮಳೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...