alex Certify BIG NEWS: 15 ದಿನಗಳಲ್ಲಿ ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರೆ; ಬೇಳೂರು ಭವಿಷ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 15 ದಿನಗಳಲ್ಲಿ ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರೆ; ಬೇಳೂರು ಭವಿಷ್ಯ

ಶಿವಮೊಗ್ಗ: ಸಂಕ್ರಾಂತಿ ನಂತರ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರೆಯಲ್ಲ. 15 ದಿನಗಳಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಭವಿಷ್ಯ ನುಡಿದಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪನವರಿಗೆ ಸಿಗಂದೂರು ಚೌಡೇಶ್ವರಿ ಶಾಪ ಕೊಡುತ್ತಾಳೆ ಎಂದು ಹೇಳಿದ್ದೆ. ಈಗಾಗಲೇ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಬಿ.ಎಸ್.ವೈ.ಗೆ ಶಾಪ ತಟ್ಟಿದೆ ಎಂದರು.

ಸಂಕ್ರಾಂತಿ ನಂತರ ಬಿ.ಎಸ್. ಯಡಿಯೂರಪ್ಪ ಸಿಎಂ ಸ್ಥಾನದಲ್ಲಿ ಮುಂದುವರೆಯಲ್ಲ. ಯಡಿಯೂರಪ್ಪ ಹೊಸ ಪಕ್ಷ ಕಟ್ಟಲಿದ್ದಾರೆ. ಸಿಎಂ ಸ್ಥಾನದಿಂದ ಕೆಳಗಿಳಿದು ಹೊಸ ಪಕ್ಷ ಸ್ಥಾಪಿಸುವ ಅನುಮಾನವಿದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...