ಅಕ್ರಮ ಮರಳು ಸಾಗಾಟ ತಡೆಯಲು ಹೋದ ಹೆಡ್ ಕಾನ್ಸ್ ಟೇಬಲ್ ಹತ್ಯೆ

ಕಲಬುರಗಿ: ಅಕ್ರಮ ಮರಳು ಸಾಗಾಟ ತಡೆಯಲು ಹೋದ ಹೆಡ್ ಕಾನ್ಸ್ಟೇಬಲ್ ಹತ್ಯೆ ಮಾಡಲಾಗಿದೆ. ಟ್ರ್ಯಾಕ್ಟರ್ ಹರಿಸಿ ಹೆಡ್ ಕಾನ್ಸ್ಟೇಬಲ್ ಮೈಸೂರ್ ಚವಾಣ್ ಅವರನ್ನು ಹತ್ಯೆ ಮಾಡಲಾಗಿದೆ.

ಕಲಬುರ್ಗಿ ಜಿಲ್ಲೆ ಜೇವರ್ಗಿ ತಾಲೂಕಿನ ನಾರಾಯಣಪುರ ಸಮೀಪ ಘಟನೆ ನಡೆದಿದೆ. ಅಕ್ರಮ ಮರಳು ಸಾಗಾಟ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಮೈಸೂರ್ ಚವಾಣ್ ತಪಾಸಣೆಗೆ ಹೋಗಿದ್ದರು. ಈ ವೇಳೆ ಅವರ ಮೇಲೆ ದುಷ್ಕರ್ಮಿಗಳು ಟ್ರ್ಯಾಕ್ಟರ್ ಹರಿಸಿದ್ದಾರೆ.

ಟ್ಯಾಕ್ಟರ್ ಚಕ್ರಕ್ಕೆ ಸಿಲುಕಿ ಮೈಸೂರು ಚವಾಣ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನೆಲೋಗಿ ಠಾಣೆಯಲ್ಲಿ ಅವರು ಹೆಡ್ ಕಾನ್ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಅಕ್ರಮ ಮರಳು ಸಾಗಾಣೆ ಮಾಡುವ ದುಷ್ಕರ್ಮಿಗಳು ಟ್ರ್ಯಾಕ್ಟರ್ ಹರಿಸಿ ಅವರನ್ನು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ನೆಲೋಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read