ಈ ಆರೋಗ್ಯ ಸಮಸ್ಯೆಗೆ ಅರಳಿ ಮರದ ತೊಗಟೆ ರಾಮಬಾಣ

ಅರಳಿ ಮರವನ್ನು ಹಿಂದೂಗಳು ದೇವರ ರೂಪದಲ್ಲಿ ಪೂಜಿಸುತ್ತಾರೆ. ಈ ಮರದ ಎಲೆ, ತೊಗಟೆ ಔಷಧೀಯ ಗುಣಗಳನ್ನು ಹೊಂದಿದೆ. ಇದು ಹಲವು ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ. ಹಾಗಾಗಿ ಇದನ್ನು ಆಯುರ್ವೇದದ ಚಿಕಿತ್ಸೆಯಲ್ಲಿ ಬಳಸುತ್ತಾರೆ.

*ಇದು ಬಾಯಿಯ ಹುಣ್ಣನ್ನು ನಿವಾರಿಸುತ್ತದೆ. ಈ ಮರದ ತೊಗಟೆಯನ್ನು ನೀರಿನಲ್ಲಿ ಕುದಿಸಿ ತಣ್ಣಗಾಗಿಸಿ ದಿನಕ್ಕೆ ಕನಿಷ್ಠ 3 ಬಾರಿ ಬಾಯಿಯನ್ನು ವಾಶ್ ಮಾಡಿ.

* ತುಂಬಾ ಕೆಮ್ಮು ಇದ್ದಾಗ ಈ ಮರದ ತೊಗಟೆಯನ್ನು ನೀರಿನಲ್ಲಿ ಕುದಿಸಿ ಆ ನೀರಿನಿಂದ 3-4 ಬಾರಿ ಗಾರ್ಗ್ಲಿಂಗ್ ಮಾಡುವುದರಿಂದ ಕೆಮ್ಮು ನಿವಾರಣೆಯಾಗುತ್ತದೆ.

 *ಈ ಮರದ ತೊಗಟೆಯನ್ನು ಬಿಸಿಲಿನಲ್ಲಿ ಒಣಗಿಸಿ ಪುಡಿ ಮಾಡಿ ಗಾಯಗಳಿಗೆ ಹಚ್ಚುವುದರಿಂದ ಗಾಯಗಳು ಶೀಘ್ರದಲ್ಲಿಯೇ ವಾಸಿಯಾಗುತ್ತವೆ.

*ನಿರಂತರವಾಗಿ ಬಿಕ್ಕಳಿಕೆ ಬರುತ್ತಿದ್ದರೆ ಈ ಮರದ ತೊಗಟೆಯನ್ನು ಬೆಂಕಿಯಲ್ಲಿ ಸುಟ್ಟು ಬೂದಿ ಮಾಡಿ ಆ ಬೂದಿಯನ್ನು ನೀರಿನಲ್ಲಿ ಮಿಕ್ಸ್ ಮಾಡಿ ಕುಡಿಯಿರಿ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read