ಈ ರಾಶಿಯ ವಿದ್ಯಾರ್ಥಿಗಳಿಗೆ ಇದೆ ಇಂದು ದೈವಾನುಗ್ರಹ

ಮೇಷ : ಕಚೇರಿಯಲ್ಲಿ ನಿಮ್ಮ ಕೆಲಸವು ಮೇಲಾಧಿಕಾರಿಗಳಿಗೆ ಮೆಚ್ಚುಗೆ ಎನಿಸಲಿದೆ. ಇದರಿಂದ ನಿಮ್ಮ ಆತ್ಮವಿಶ್ವಾಸ ಕೂಡ ಹೆಚ್ಚಲಿದೆ. ಮಕ್ಕಳ ಭವಿಷ್ಯದ ಬಗ್ಗೆ ಚಿಂತೆ ಹೆಚ್ಚಾಗಲಿದೆ. ಹೊಸ ಉದ್ಯಮಗಳಿಗೆ ಹೂಡಿಕೆ ಮಾಡಲು ಬಯಸುವವರಿಗೆ ಇದು ಶುಭ ದಿನವಾಗಿದೆ.

ವೃಷಭ : ನಿಮ್ಮ ವ್ಯಾಪಾರ – ವ್ಯವಹಾರಗಳ ವಿಚಾರದಲ್ಲಿ ತಂದೆಯು ನಿರ್ಣಾಯಕ ಪಾತ್ರ ವಹಿಸಲಿದ್ದಾರೆ. ಆರ್ಥಿಕ ವಿಚಾರವಾಗಿ ಸ್ನೇಹಿತರೊಂದಿಗೆ ಉಂಟಾಗಿದ್ದ ಮುನಿಸು ಕ್ರಮೇಣವಾಗಿ ಸುಧಾರಿಸಲಿದೆ. ಕಚೇರಿ ಕೆಲಸದ ನಿಮಿತ್ತ ದೂರ ಪ್ರಯಾಣ ಅನಿವಾರ್ಯ.

ಮಿಥುನ : ಕಿರಿಯ ಸೋದರನ ಆರ್ಥಿಕ ಸಂಕಷ್ಟಕ್ಕೆ ನೀವು ಹೆಗಲಾಗಲಿದ್ದೀರಿ. ಇದು ನಿಮ್ಮ ಪೋಷಕರಿಗೆ ನಿಮ್ಮ ಮೇಲೆ ಪ್ರೀತಿ ಹೆಚ್ಚಿಸಲಿದೆ. ಮನೆಗೆ ಪೀಠೋಪಕರಣಗಳನ್ನು ಖರೀದಿ ಮಾಡಲಿದ್ದೀರಿ. ನಿಮ್ಮ ವೈವಾಹಿಕ ಸಂಬಂಧದ ಬಗ್ಗೆ ಪೋಷಕರು ಚರ್ಚೆ ನಡೆಸಲಿದ್ದಾರೆ.

ಕಟಕ : ವ್ಯಾಪಾರ – ವ್ಯವಹಾರದಲ್ಲಿ ನೀವು ಲಾಭವನ್ನು ಹೊಂದಲಿದ್ದೀರಿ. ಕಚೇರಿಯಲ್ಲಿ ಭಯ ಪಟ್ಟು ಕೆಲಸ ಮಾಡುವಂತಹ ಸನ್ನಿವೇಶ ಎದುರಾಗಲಿದೆ. ಹತ್ತಿರದ ಸಂಬಂಧಿಗಳ ಭೇಟಿ ಮನಸ್ಸಿಗೆ ಖುಷಿ ಎನಿಸಲಿದೆ. ವಿದ್ಯಾರ್ಥಿಗಳಿಗೆ ದೈವಾನುಗ್ರಹ ಇರಲಿದೆ.

ಸಿಂಹ : ಪೂರ್ವಜರ ಆಸ್ತಿಯಿಂದ ನಿಮಗೆ ಲಾಭ ದೊರಕಿದೆ. ನಿಮ್ಮ ಜೀವನ ಸಂಗಾತಿಯಿಂದ ಧನಲಾಭ ಹೊಂದಲಿದ್ದೀರಿ. ವಿದ್ಯಾರ್ಥಿಗಳಿಗೆ ವಿದೇಶಿ ಪ್ರಯಾಣದ ಭಾಗ್ಯವಿದೆ. ವ್ಯಾಪಾರ – ವ್ಯವಹಾರಗಳಲ್ಲಿ ಸ್ಥಿರತೆಯನ್ನು ಕಾಣಲಿದ್ದೀರಿ.

ಕನ್ಯಾ : ಜಾಗದ ವಿಚಾರಕ್ಕೆ ನೆರೆಮನೆಯವರ ಜೊತೆ ದೊಡ್ಡ ಗಲಾಟೆಯೇ ನಡೆಯಬಹುದು. ಯಾವುದೇ ಸಂದರ್ಭದಲ್ಲಿಯೂ ಮಾತಿನ ಮೇಲೆ ಹಿಡಿತವಿತಲಿ. ಇಂದು ನೀವು ಅನೇಕ ಕಷ್ಟ ಕಾರ್ಪಣ್ಯಗಳನ್ನು ಎದುರಿಸಲಿದ್ದೀರಿ. ಕುಲದೇವರನ್ನು ಪ್ರಾರ್ಥಿಸಿ.

ತುಲಾ : ಅನಾರೋಗ್ಯದಲ್ಲಿ ಬಳಲುತ್ತಿದ್ದವರು ಇಂದು ಚೇತರಿಕೆ ಕಾಣಲಿದ್ದಾರೆ. ಸಹೋದರಿಯು ನಿಮಗೆ ಇಂದು ಉಡುಗೊರೆ ನೀಡಲಿದ್ದಾರೆ. ಆಧ್ಯಾತ್ಮಿಕ ಕ್ಷೇತ್ರದಲ್ಲಿ ಒಲವು ತೋರಲಿದ್ದೀರಿ. ಅನಗತ್ಯ ಖರ್ಚು ವೆಚ್ಚಗಳ ಮೇಲೆ ಹಿಡಿತ ಇರಲಿ.

ವೃಶ್ಚಿಕ : ಆದಾಯಕ್ಕಿಂತ ಹೆಚ್ಚಿನ ಖರ್ಚಿನಿಂದಾಗಿ ಆರ್ಥಿಕ ಸಂಕಷ್ಟ ಎದುರಿಸಲಿದ್ದೀರಿ. ಸಾಲಗಾರರು ಮನೆ ಬಾಗಿಲಿಗೆ ಬರಲಿದ್ದಾರೆ. ಶಿವನನ್ನು ಆರಾಧಿಸಿ. ವಿದ್ಯಾರ್ಥಿಗಳಿಗೆ ಈ ದಿನ ಅನುಕೂಲಕರವಾಗಿದೆ.

ಧನು : ಹಿರಿಯ ಸಹೋದರನಿಂದ ನೀವಿಂದು ಲಾಭವನ್ನು ಗಳಿಸುವ ಸಾಧ್ಯತೆ ಇದೆ. ಕೋರ್ಟ್ ಕಚೇರಿ ವ್ಯವಹಾರಗಳಲ್ಲಿ ನಿಮಗೆ ಮುನ್ನಡೆ ಕಾದಿದೆ. ಸೊಸೆಯು ಮನೆಯ ಶಾಂತಿಯನ್ನು ಕದಡುವ ಸಾಧ್ಯತೆ ಇದೆ.

ಮಕರ : ನೀವಿಂದು ಉದ್ಯಮದಲ್ಲಿ ಅತ್ಯುತ್ತಮ ಯಶಸ್ಸನ್ನು ಕಾಣಲಿದ್ದೀರಿ. ಭೂಮಿ ಖರೀದಿ ಮಾಡ ಬಯಸುವವರಿಗೆ ಇದು ಶುಭ ದಿನವಾಗಿದೆ. ವೃತ್ತಿ ರಂಗದಲ್ಲಿ ನಿಮ್ಮ ಸಾಮರ್ಥ್ಯ ಹೆಚ್ಚಲಿದೆ.

ಕುಂಭ : ಉದ್ಯೋಗ ಸಿಗದೇ ಅಲೆದಾಡುತ್ತಿದ್ದ ನಿಮಗೆ ಉದ್ಯೋಗ ಸಿಗುವ ಸಾಧ್ಯತೆ ಇದೆ. ಇಂದು ನೀವು ವಾಹನ ಖರೀದಿ ಮಾಡಲಿದ್ದೀರಿ. ಸಂಗಾತಿಯ ಕುಟುಂಬಸ್ಥರ ಜೊತೆ ವಾಗ್ವಾದ ಉಂಟಾಗಬಹುದು. ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ತೆರಳಲಿದ್ದೀರಿ.

ಮೀನ : ಆಧ್ಮಾತ್ಮಿಕ ಕ್ಷೇತ್ರದತ್ತ ಒಲವು ತೋರಲಿದ್ದೀರಿ. ಸಂಗಾತಿಯು ಇಂದು ಅದೃಷ್ಟದಿಂದ ಧನಲಾಭ ಪಡೆಯಲಿದ್ದಾರೆ. ಉದ್ಯಮದಲ್ಲಿ ಸಂಗಾತಿ ಸಾಧಿಸುತ್ತಿರುವ ಯಶಸ್ಸು ನಿಮಗೆ ಸಂತೋಷ ನೀಡಲಿದೆ. ಪೋಷಕರ ಆರೋಗ್ಯದ ಬಗ್ಗೆ ಆದಷ್ಟು ಜಾಗ್ರತೆ ಇರಲಿ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read