ಕಲಾ ತಂಡಗಳಿಗೆ ಶುಭ ಸುದ್ದಿ ನೀಡಿದ ರಾಜ್ಯ ಸರ್ಕಾರ

ಕಲಾ ತಂಡಗಳಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಿದೆ. ಸಾಂಸ್ಕೃತಿಕ ಚಟುವಟಿಕೆಗಳಿಗಾಗಿ ಈ ಮೊದಲು ನೀಡುತ್ತಿದ್ದ 5 ಲಕ್ಷ ರೂಪಾಯಿ ಧನಸಹಾಯವನ್ನು ಮುಂದುವರಿಸಲು ತೀರ್ಮಾನಿಸಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಾಜ್ಯದ ಕಲಾ ತಂಡಗಳಿಗೆ ವಾರ್ಷಿಕ 5 ಲಕ್ಷ ರೂಪಾಯಿ ಧನ ಸಹಾಯವನ್ನು ನೀಡಲಾಗುತ್ತಿದ್ದು, ಇದನ್ನು 2 ಲಕ್ಷ ರೂಪಾಯಿಗಳಿಗೆ ಇಳಿಕೆ ಮಾಡಲಾಗಿತ್ತು.

ಆದರೆ ಇದನ್ನು ಕಲಾ ತಂಡಗಳು ವಿರೋಧಿಸಿದ್ದು ಸರ್ಕಾರದ ಗಮನಕ್ಕೂ ತರಲಾಗಿತ್ತು. ಇದೀಗ ಸರ್ಕಾರದ ಸೂಚನೆಯಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ 5 ಲಕ್ಷ ರೂಪಾಯಿ ಧನ ಸಹಾಯ ಮುಂದುವರಿಸಲು ಆದೇಶ ಹೊರಡಿಸಿದೆ. ಜೊತೆಗೆ ಡಿಸೆಂಬರ್ ಅಂತ್ಯದೊಳಗೆ ಮೂರು ಕಾರ್ಯಕ್ರಮ ಮುಗಿಸಬೇಕೆಂಬ ಆದೇಶವನ್ನು ಮಾರ್ಪಡಿಸಿ ವರ್ಷದಲ್ಲಿ ಮೂರು ಕಾರ್ಯಕ್ರಮ ಎಂದು ತಿದ್ದುಪಡಿ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read