ಕಳೆದ ಚುನಾವಣೆಯಲ್ಲಿನ ಸೋಲು ನೆನೆದು ಕಣ್ಣೀರಿಟ್ಟ ಚೆಲುವರಾಯಸ್ವಾಮಿ….!

ಮಂಡ್ಯ ಜಿಲ್ಲೆ, ನಾಗಮಂಗಲ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಚೆಲುವರಾಯಸ್ವಾಮಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಾವು ಭಾರಿ ಮತಗಳ ಅಂತರದಿಂದ ಸೋಲನ್ನಪ್ಪಿರುವುದನ್ನು ನೆನೆದು ಕಣ್ಣೀರಿಟ್ಟಿದ್ದಾರೆ.

ನಾಗಮಂಗಲದಲ್ಲಿ ಇಂದು ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿದ್ದ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ 40,000ಕ್ಕೂ ಅಧಿಕ ಮತಗಳ ಅಂತರದಿಂದ ನಾನು ಪರಾಭವಗೊಂಡಿದ್ದೇನೆ. ಇದು ನನಗೆ ನೋವು ತಂದಿದೆ ಎಂದು ಭಾವುಕರಾಗಿದ್ದಾರೆ.

ಕಾಂಗ್ರೆಸ್ ಪಕ್ಷ ನನ್ನನ್ನು ನಿರ್ಲಕ್ಷ್ಯ ಮಾಡಿಲ್ಲ ಎಂದು ಇದೇ ಸಂದರ್ಭದಲ್ಲಿ ಹೇಳಿದ ಅವರು, ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ನಾವು ಸೋತರೂ ಸಹ ಮತ್ತೆ ನನಗೆ ಟಿಕೆಟ್ ನೀಡಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಸೋತರೆ ನಾನು ರಾಜಕೀಯ ನಿವೃತ್ತಿ ಪಡೆಯುವುದಾಗಿ ಘೋಷಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read