ಕಾಂಗ್ರೆಸ್ ಸಂಭ್ರಮಾಚರಣೆ ವೇಳೆ ಅವಘಡ; ಪಟಾಕಿ ಸಿಡಿದು ‘ಕೈ’ ನಾಯಕನಿಗೆ ಗಾಯ

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸ್ತಿದ್ದಂತೆ ಪಕ್ಷದ ಕಾರ್ಯಕರ್ತರ ಸಂಭ್ರಮ ಮುಗಿಲುಮುಟ್ಟಿದೆ. ಇತ್ತ ಕೈ ಪಕ್ಷ ಹೆಚ್ಚಿನ ಸ್ಥಾನ ಗೆಲ್ಲುತ್ತಿದ್ದಂತೆ ದೆಹಲಿಯಲ್ಲಿನ ಕಾಂಗ್ರೆಸ್ ಪಕ್ಷದ ಕಚೇರಿ ಮುಂದೆ ನೂರಾರು ಕಾರ್ಯಕರ್ತರು ಪಟಾಕಿ ಹಚ್ಚಿ ಸಿಹಿ ಹಂಚಿ ಸಂಭ್ರಮಿಸಿದರು. ಆದರೆ ಈ ವೇಳೆ ಅವಘಡವೊಂದು ಜರುಗಿತು. ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ.

ಕಾಂಗ್ರೆಸ್ ನಾಯಕರೊಬ್ಬರು ಪಟಾಕಿ ಸಿಡಿಸುವ ವೇಳೆ ಗಾಯದಿಂದ ಪಾರಾಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ವಿಡಿಯೋದಲ್ಲಿ ಕಾಂಗ್ರೆಸ್ ನಾಯಕರೊಬ್ಬರು ಪಟಾಕಿ ಹಚ್ಚಿ, ಬ್ಯಾಲೆನ್ಸ್ ಕಳೆದುಕೊಂಡು ಪಟಾಕಿ ಪೆಟ್ಟಿಗೆಯನ್ನು ಬೀಳಿಸುತ್ತಿರುವುದನ್ನು ತೋರಿಸುತ್ತದೆ. ಈ ವೇಳೆ ಪಟಾಕಿಗಳು ಸ್ಫೋಟಗೊಳ್ಳುತ್ತಲೇ ಇದ್ದವು. ಪೆಟ್ಟಿಗೆಯನ್ನು ತೆಗೆದುಕೊಳ್ಳಲು ಪ್ರಯತ್ನಿಸುತ್ತಿರುವಾಗ ಪಟಾಕಿಯು ಅವರ ಕಣ್ಣುಗಳಿಗೆ ಅಪಾಯಕಾರಿಯಾಗಿ ಸ್ಫೋಟಗೊಳ್ಳುತ್ತದೆ. ಅದೃಷ್ಟವಶಾತ್ ಈ ವೇಳೆ ಕಾಂಗ್ರೆಸ್ ನಾಯಕನು ಘಟನೆಯಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

https://twitter.com/ANI/status/1657253538584743937?ref_src=twsrc%5Etfw%7Ctwcamp%5Etweetembed%7Ctwterm%5E1657253538584743937%7Ctwgr%5Ee91f156fa129a48ad1c81de358b9128a93849e8e%7Ctwcon%5Es1_&ref_url=http%3A%2F%2Fm.dailyhunt.in%2Fnews%2Findia%2Fenglish%2Flokmat08408565043306-epaper-dhfd5012174f5c4159918eaf51ebc42a19%2Fwatchkarnatakaelectioncelebrationsturndangerousasfirecrackerexplodesnearcongressleader-newsid-n499302152

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read