ಕೇಸರಿ ಪೇಟ ತೊಡಲು ನಿರಾಕರಿಸಿದ ಸಿದ್ದರಾಮಯ್ಯ…!

ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಪ್ರಚಾರ ಕಾರ್ಯ ಆರಂಭಿಸಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜಂಟಿಯಾಗಿ ರಾಜ್ಯದಾದ್ಯಂತ ಪ್ರವಾಸ ನಡೆಸುತ್ತಿದ್ದಾರೆ.

ಮಂಗಳವಾರದಂದು ಗದಗದಲ್ಲಿ ಏರ್ಪಡಿಸಲಾಗಿದ್ದ ಕಾಂಗ್ರೆಸ್ ಜನ ಧ್ವನಿ ಯಾತ್ರೆಯ ವೇದಿಕೆಯಲ್ಲಿ ಕೆಲವರು ಕೇಸರಿ ಬಣ್ಣದ ಪೇಟ ಕೊಡಲು ಮುಂದಾಗಿದ್ದು, ಇದನ್ನು ಸಿದ್ದರಾಮಯ್ಯನವರು ಸ್ವೀಕರಿಸಿಲ್ಲ.

ಅಲ್ಲದೆ ಸಭೆ ಆರಂಭವಾಗುವ ಮುನ್ನ ಕುಂಕುಮ ಹಚ್ಚಿಕೊಂಡಿದ್ದ ಸಿದ್ದರಾಮಯ್ಯನವರು ಬಳಿಕ ಮುಖ ಒರೆಸಿಕೊಳ್ಳುವಾಗ ಕುಂಕುಮವನ್ನೂ ಸಹ ಒರೆಸಿಕೊಂಡಿದ್ದು ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read