ಹಾಸನ : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಯುವಕನನ್ನ ಬರ್ಬರವಾಗಿ ಹತ್ಯೆಗೈದ ಹಂತಕರು ‘ನಾವೇ ಕೊಲೆ ಮಾಡಿದ್ದೇವೆ’ ಎಂದು ಸೆಲ್ಪಿ ವೀಡಿಯೋ ಮಾಡಿ ಹರಿಬಿಟ್ಟ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿ ಬಳಿ ಈ ಕೊಲೆ ನಡೆದಿದೆ. ಕೀರ್ತಿ ಎಂಬ ಯುವಕನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ ನಂತರ ಮೃತದೇಹದ ಮುಂದೆ ಸೆಲ್ಪಿ ವಿಡಿಯೋ ಮಾಡಿದ್ದಾರೆ.
ಆಟೋ ಚಾಲಕ ಕೀರ್ತಿ ತಲ್ಯ ಎಂಬಾತನನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈತ ಹಾಸನದ ಹೂವಿನಹಳ್ಳಿ ಕಾವಲು ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ. ಶವದ ಮುಂದೆ ಸೆಲ್ಪಿ ವಿಡಿಯೋ ಮಾಡಿದ ಹಂತಕರು ನಂತರ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.ಈ ಸಂಬಂಧ ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವೀಡಿಯೋ ಆಧರಿಸಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
