ಖರ್ಗೆ ಸಾವು ಬಯಸಿದ ಬಿಜೆಪಿ ಶಾಸಕ; ಕಾಂಗ್ರೆಸ್ ತೀವ್ರ ವಾಗ್ದಾಳಿ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಗಳ ನಾಯಕರು ಪರಸ್ಪರ ವಾಗ್ದಾಳಿ ನಡೆಸುತ್ತಿದ್ದು, ಇದು ತೀರಾ ವೈಯಕ್ತಿಕ ಮಟ್ಟಕ್ಕೆ ಇಳಿಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಷ ಸರ್ಪಕ್ಕೆ ಹೋಲಿಸಿದ್ದು, ಬಳಿಕ ಕ್ಷಮೆ ಯಾಚಿಸಿದ್ದರು. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರನ್ನು ವಿಷ ಕನ್ಯೆ ಎಂದಿದ್ದು, ಅವರಿಗೆ ಈಗ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ.

ಇದರ ಮಧ್ಯೆ ರಾಜಸ್ಥಾನದ ಬಿಜೆಪಿ ಶಾಸಕ ಮದನ್ ದಿಲಾವರ್, ಮಲ್ಲಿಕಾರ್ಜುನ ಖರ್ಗೆಯವರನ್ನು ಟೀಕಿಸುವ ವೇಳೆ ತಮ್ಮ ನಾಲಿಗೆಯನ್ನು ಹರಿಬಿಟ್ಟಿದ್ದು, ಖರ್ಗೆ ಅವರಿಗೆ 80 ವರ್ಷ ವಯಸ್ಸಾಗಿದೆ. ದೇವರು ಯಾವಾಗ ಬೇಕಾದರೂ ಅವರನ್ನು ಕರೆಯಿಸಿಕೊಳ್ಳಬಹುದು ಎಂದಿದ್ದರು. ಇದೀಗ ಅವರ ವಿರುದ್ಧ ಕಾಂಗ್ರೆಸ್ ನಾಯಕರು ಮುಗಿಬಿದ್ದಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ಮಾಧ್ಯಮ ಮುಖ್ಯಸ್ಥ ಪವನ್ ಖೇರಾ, ಪಕ್ಷಾತೀತವಾಗಿ ಎಲ್ಲರಿಂದ ಗೌರವಿಸಲ್ಪಡುವ ಖರ್ಗೆ ಅವರ ಸಾವನ್ನು ಬಿಜೆಪಿ ಬಯಸುತ್ತಿದೆ. ಕರ್ನಾಟಕದಲ್ಲಿ ಸೋಲುವ ಭೀತಿಯಿಂದ ಹತಾಶ ಮನೋಭಾವದಲ್ಲಿ ಖರ್ಗೆಯವರ ಸಾವು ಬಯಸುವಂತಹ ಕೀಳು ಮಟ್ಟಕ್ಕೆ ಇಳಿದಿದೆ ಎಂದು ಟೀಕಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read