BIG NEWS : ಸಾರ್ವಜನಿಕರೇ  ಗಮನಿಸಿ : ರಾಜ್ಯದ ಹಲವೆಡೆ ನಾಳೆ ‘ಅಂಚೆ ಕಚೇರಿ ವಹಿವಾಟು’ ಸ್ಥಗಿತ.!

ಬೆಂಗಳೂರು : ಅಂಚೆ ಕಚೇರಿಗಳಲ್ಲಿ ಹೊಸ ತಂತ್ರಾಂಶ ಅಳವಡಿಕೆ ಹಿನ್ನೆಲೆ ರಾಜ್ಯದ ಹಲವೆಡೆ ನಾಳೆ ಅಂಚೆ ವಹಿವಾಟು ಸ್ಥಗಿತವಾಗಲಿದೆ.

ಕೊಡಗು

ಎಪಿಟಿ 2.0 ಅಡಿಯಲ್ಲಿ ಹೊಸ ತಂತ್ರಾಂಶವನ್ನು ಜೂನ್, 23 ರಂದು ಅಳವಡಿಸುತ್ತಿರುವ ಕಾರಣ ನಗರದ ಪ್ರಧಾನ ಅಂಚೆ ಕಚೇರಿ ಮತ್ತು ಅದರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಉಪ ಅಂಚೆ ಕಚೇರಿಗಳು ಮತ್ತು ಅದರ ಕಾರ್ಯವ್ಯಾಪ್ತಿಯಲ್ಲಿ ಬರುವ ಎಲ್ಲಾ ಶಾಖಾ ಅಂಚೆ ಕಚೇರಿಗಳಲ್ಲಿ ಜೂನ್, 21 ರಂದು ಯಾವುದೇ ರೀತಿಯ ಅಂಚೆ ವಹಿವಾಟು ಇರುವುದಿಲ್ಲ.

ಮಡಿಕೇರಿ ಪ್ರಧಾನ ಅಂಚೆ ಕಚೇರಿ ಹಾಗೂ ಉಪ ಅಂಚೆ ಕಚೇರಿಗಳಾದ ಮಡಿಕೇರಿ(ಡಿಒಸಿ), ವಿದ್ಯಾನಗರ, ಅಮ್ಮತ್ತಿ, ಭಾಗಮಂಡಲ, ಬಾಳೆಲೆ, ಚೆಟ್ಟಳ್ಳಿ, ಚೆಯ್ಯಂಡಾಣೆ, ಗೋಣಿಕೊಪ್ಪಲು, ಹುದಿಕೇರಿ, ಕೊಡ್ಲಿಪೇಟೆ, ಕೂಡಿಗೆ ಕುಶಾಲನಗರ, ಕುಟ್ಟ, ಮಾದಾಪುರ, ಮೂರ್ನಾಡು, ನಾಪೋಕ್ಲು, ಪಾಲಿಬೆಟ್ಟ, ಪೊನ್ನಂಪೇಟೆ, ಶನಿವಾರಸಂತೆ, ಸಿದ್ದಾಪುರ, ಸೋಮವಾರಪೇಟೆ, ಶ್ರೀಮಂಗಲ, ಸುಂಟಿಕೊಪ್ಪ, ತಿತಿಮತಿ, ವಿರಾಜಪೇಟೆ, ಅಂಚೆ ಕಚೇರಿಗಳು ಜೂನ್, 21 ರಂದು ಯಾವುದೇ ಅಂಚೆ ವಹಿವಾಟು ನಡೆಸುವುದಿಲ್ಲ ಎಂದು ಕೊಡಗು ಅಂಚೆ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.

ಶಿವಮೊಗ್ಗದಲ್ಲೂ ಸ್ಥಗಿತ

ಭಾರತೀಯ ಅಂಚೆ ಇಲಾಖೆ ಆದೇಶದಂತೆ ಜೂನ್ 23 ರಂದು ಶಿವಮೊಗ್ಗ ಪ್ರಧಾನ ಅಂಚೆ ಕಚೇರಿ, ಜೂ.26 ರಂದು ಭದ್ರಾವತಿ ಮತ್ತು ಸಾಗರ ಪ್ರಧಾನ ಅಂಚೆ ಕಚೇರಿಗಳ ಮತ್ತು ಅದರ ವ್ಯಾಪ್ತಿಯ ಎಲ್ಲಾ ಉಪ ಹಾಗೂ ಶಾಖಾ ಅಂಚೆ ಕಚೇರಿಗಳಲ್ಲಿ ಹೊಸ ತಂತ್ರಾಂಶ (ಎ.ಪಿ.ಟಿ.2.0) ಅಳವಡಿಕೆ ಮಾಡಲು ಉದ್ದೇಶಿಸಿದೆ.

ಈ ಸಂಬಂಧ ಪೂರ್ವಸಿದ್ಧತೆಗಾಗಿ ಜೂ. 21 ರಂದು ಶಿವಮೊಗ್ಗ ಹಾಗೂ ತೀರ್ಥಹಳ್ಳಿ ತಾಲೂಕುಗಳ ಅಡಿಯಲ್ಲಿ ಬರುವ ಅಂಚೆ ಕಚೇರಿಗಳಲ್ಲಿ ಎಲ್ಲಾ ರೀತಿಯ ವ್ಯವಹಾರ ವಹಿವಾಟುಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಿದೆ.
ಜೂ. 25 ರಂದು ಭದ್ರಾವತಿ, ಸಾಗರ, ಸೊರಬ, ಹೊಸನಗರ ಹಾಗೂ ಶಿಕಾರಿಪುರ ತಾಲೂಕುಗಳ ಅಡಿಯಲ್ಲಿ ಬರುವ ಅಂಚೆ ಕಚೇರಿಗಳಲ್ಲಿ ಎಲ್ಲಾ ರೀತಿಯ ವ್ಯವಹಾರ ವಹಿವಾಟುಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಿದೆ. ಸಾರ್ವಜನಿಕರು ಸಹಕರಿಸುವಂತೆ ಅಂಚೆ ಅಧೀಕ್ಷಕ ಜಯರಾಮ ಶೆಟ್ಟಿ ಜಿ. ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಗದಗದಲ್ಲೂ ಸ್ಥಗಿತ

ಗದಗ ವಿಭಾಗೀಯ ಅಂಚೆ ವ್ಯಾಪ್ತಿಗೆ ಬರುವ ಮುಂಡರಗಿ, ರೋಣ, ನರಗುಂದ, ಶಿರಹಟ್ಟಿ, ಡಂಬಳ, ಬೆಳ್ಳಟ್ಟಿ, ಮುಳಗುಂದ, ಲಕ್ಕುಂಡಿ, ಬೆಳವಣಕಿ, ಲಕ್ಷೇಶ್ವರ, ಗದಗ ನಗರ, ಗಜೇಂದ್ರಗಡ, ಲಕ್ಕುಂಡಿ, ಬೆಟಗೇರಿ ಉಪ ಅಂಚೆ ಕಚೇರಿ ಹಾಗೂ ಶಾಖಾ ಅಂಚೆ ಕಚೇರಿಗಳಲ್ಲಿ ಜೂನ್ 21ರಂದು ಯಾವುದೇ ವ್ಯವಹಾರ, ವಹಿವಾಟು ಇರುವುದಿಲ್ಲ. ಅಂಚೆ ಕಚೇರಿ ಗ್ರಾಹಕರು ಸಹಕರಿಬೇಕು ಎಂದು ಗದಗ ವಿಭಾಗೀಯ ಅಂಚೆ ಅಧೀಕ್ಷಕ ರಮೇಶ ಮಡಿವಾಳರ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಬಳ್ಳಾರಿ

ಭಾರತೀಯ ಅಂಚೆ ಇಲಾಖೆಯ ಆದೇಶದಂತೆ ಬಳ್ಳಾರಿ ಪ್ರಧಾನ ಕಚೇರಿ ವ್ಯಾಪ್ತಿಗೆ ಬರುವ ಎಲ್ಲಾ ಉಪ ಅಂಚೆ ಕಚೇರಿ ಹಾಗೂ ಶಾಖಾ ಅಂಚೆ ಕಚೇರಿಗಳಲ್ಲಿ ಹೊಸ ತಂತ್ರಾಂಶ (ಎಪಿಟಿ 2.0) ಅಳವಡಿಕೆ ಜಾರಿಯಾಗುತ್ತಿದ್ದು, ಈ ಹಿನ್ನಲೆಯಲ್ಲಿ ಜೂ. 20 ಮತ್ತು 21 ರಂದು ಎರಡು ದಿನಗಳ ಕಾಲ ಅಂಚೆ ಕಚೇರಿಗಳಲ್ಲಿ ವಹಿವಾಟು ಸ್ಥಗಿತಗೊಳಿಸಲಾಗುವುದು ಎಂದು ಬಳ್ಳಾರಿ ವಿಭಾಗದ ಅಂಚೆ ಅಧೀಕ್ಷಕ ಪಿ.ಚಿದಾನಂದ ಅವರು ತಿಳಿಸಿದ್ದಾರೆ.

ಭಾರತೀಯ ಅಂಚೆ ಇಲಾಖೆಯು ಆಧುನಿಕ ಹಾಗೂ ಗ್ರಾಹಕ ಸ್ನೇಹಿ ತಂತ್ರಾಶವನ್ನು ಅಭಿವೃದ್ಧಿಪಡಿಸಿ, ಆಧುನಿಕ ತಂತ್ರಜ್ಞಾನದ ನೆಟ್ವರ್ಕ್ ಸಮಸ್ಯೆಯಂತಹ ತೊಡಕುಗಳಿಂದ ಗ್ರಾಹಕರ ಸೇವೆಗಳಿಗೆ ಚ್ಯುತಿ ಬರದಂತೆ ಗಮನಹರಿಸಿ (ಅಡ್ವನ್ಸ್ಡ್ ಪೋಸ್ಟಲ್ ಟೆಕ್ನಾಲಜಿ 2.0) ಯನ್ನು ದೇಶಾದ್ಯಂತ ಎಲ್ಲಾ ಅಂಚೆ ಕಚೇರಿಗಳಲ್ಲಿ ಅಳವಡಿಸಲು ಮುಂದಾಗಿದೆ. ಇದರ ಪ್ರಯುಕ್ತ ಬಳ್ಳಾರಿ ಅಂಚೆ ವಿಭಾಗದ ಬಳ್ಳಾರಿ ಪ್ರಧಾನ ಅಂಚೆ ಕಚೇರಿ ಹಾಗೂ ಅದರಡಿ ಬರುವ ಎಲ್ಲಾ ಉಪ ಅಂಚೆ ಕಚೇರಿಗಳು ಮತ್ತು ಶಾಖಾ ಅಂಚೆ ಕಚೇರಿಗಳಲ್ಲಿ ಎ.ಪಿ.ಟಿ 2.0 ತಂತ್ರಾಂಶವನ್ನು ಜೂ.23 ರಂದು ಅಳವಡಿಸಲು ಮುಂದಾಗಿದೆ.

ಈ ಚಟುವಟಿಕೆಯ ಪೂರ್ವಭಾವಿಯಾಗಿ ಬಳ್ಳಾರಿ ಅಂಚೆ ವಿಭಾಗದ ವ್ಯಾಪ್ತಿಗೆ ಬರುವ ಬಳ್ಳಾರಿ ಪ್ರಧಾನ ಅಂಚೆ ಕಚೇರಿ, ಬಳ್ಳಾರಿ ನಗರದಲ್ಲಿರುವ ಇತರೆ ಎಲ್ಲಾ ಅಂಚೆ ಕಚೇರಿಗಳು, ಸಿರುಗುಪ್ಪ, ಸಿರುಗುಪ್ಪ ಸದಾಶಿವನಗರ, ಹಚ್ಚೊಳ್ಳಿ, ತೆಕ್ಕಲಕೋಟೆ, ಎಮ್ಮಿಗನೂರು, ಕುರುಗೋಡು, ಸಿರಿಗೇರಿ, ಕರೂರು, ಕೋಳೂರು, ಮೋಕಾ, ಚೆಳ್ಳಗುರ್ಕಿ, ಕುಡುತಿನಿ, ಬಿ.ಟಿ.ಪಿ.ಎಸ್, ತೋರಣಗಲ್ಲು, ವಿದ್ಯಾನಗರ, ಶಂಕರಹಿಲ್ ಟೌನ್, ಸಂಡೂರು, ಸಂಡೂರು ಲಕ್ಷಿö್ಪುರ, ದೇವಗಿರಿ, ದೋಣಿಮಲೈ ಟೌನ್ ಶಿಪ್, ಯಶವಂತನಗರ, ಉಪ ಅಂಚೆ ಕಚೇರಿಗಳು ಹಾಗೂ ಸಂಬAಧಿತ ಶಾಖಾ ಅಂಚೆ ಕಚೇರಿಗಳಲ್ಲಿ ಜೂನ್ 20 ಮತ್ತು 21 ರಂದು ಯಾವುದೇ ವ್ಯವಹಾರ, ವಹಿವಾಟು ಇರುವುದಿಲ್ಲ.ಅಂಚೆ ಕಚೇರಿಯ ಗ್ರಾಹಕರು ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read