ಗಮನಿಸಿ: ದಕ್ಷಿಣ ಒಳನಾಡಿನ ಈ ಮೂರು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ರಾಜ್ಯದ ಕೆಲ ಭಾಗಗಳಲ್ಲಿ ಮಳೆಯಾಗುತ್ತಿದ್ದು, ಸೋಮವಾರ ರಾತ್ರಿ ಹಾಸನ, ಕೊಡಗು ಮತ್ತು ಮಂಡ್ಯದಲ್ಲಿ ಆಲಿಕಲ್ಲು, ಬಿರುಗಾಳಿ, ಮಿಂಚು ಗುಡುಗಿನಿಂದ ಕೂಡಿದ ಬಿರುಸಿನ ಮಳೆಯಾಗಿದೆ. ಜೊತೆಗೆ ಮಂಗಳವಾರ ಕೂಡ ಮಳೆ ಸುರಿದಿದೆ.

ಮಳೆ ಇಂದೂ ಕೂಡ ಮುಂದುವರಿಯುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಜೊತೆಗೆ ರಾಜ್ಯದ ಹಲವೆಡೆ ಮುಂದಿನ 48 ಗಂಟೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಗಾಳಿಯು ಪ್ರತಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬೀಸಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read