ಗುಜರಾತ್ ಸಿಂಹ ಕರ್ನಾಟಕಕ್ಕೆ ಬಂದಾಗಲೆಲ್ಲಾ ಕಾಂಗ್ರೆಸ್ ನಾಯಕರು ಹೆದರುತ್ತಾರೆ ಏಕೆ ? ಸಂಸದ ಪ್ರತಾಪ್ ಸಿಂಹ ಟಾಂಗ್

ಬಂಡಿಪುರ ವನ್ಯಜೀವಿ ವಿಭಾಗಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಭೇಟಿ ನೀಡಿರುವ ಕುರಿತಂತೆ ವ್ಯಂಗ್ಯವಾಡಿರುವ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿ ಕಾರಿದ ಸಂಸದ ಪ್ರತಾಪ್ ಸಿಂಹ, ಗುಜರಾತ್ ಸಿಂಹ ಕರ್ನಾಟಕಕ್ಕೆ ಬಂದಾಗೆಲ್ಲ ಕಾಂಗ್ರೆಸ್ ನಾಯಕರು ಹೆದರುವುದು ಏಕೆ ಎಂದು ಟಾಂಗ್ ನೀಡಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರಿಗೆ ಮೋದಿ ಅವರ ಬಗ್ಗೆ ಭಯವಿದೆ. ವನ್ಯಜೀವಿ ಕಾಳಜಿ ಹಿನ್ನಲೆಯಲ್ಲಿ ನರೇಂದ್ರ ಮೋದಿಯವರು ಬಂಡಿಪುರಕ್ಕೆ ಭೇಟಿ ನೀಡಿದ್ದರು ಎಂದರು.

ಇನ್ನು ಅಮುಲ್ ಜೊತೆ ನಂದಿನಿ ವಿಲೀನ ಎಂಬ ಪ್ರತಿಪಕ್ಷಗಳ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಗೆ ಕೆಎಂಎಫ್ ಬಗ್ಗೆ ನಿಜವಾದ ಕಾಳಜಿ ಇದೆ. ಕಾಂಗ್ರೆಸ್ – ಜೆಡಿಎಸ್ ನಿಂದ ನಾವು ಪಾಠ ಕಲಿಯಬೇಕಿಲ್ಲ ಎಂದು ತಿರುಗೇಟು ನೀಡಿದರು.

ಇನ್ನು ನರೇಂದ್ರ ಮೋದಿಯವರಿಗೆ ಒಂದು ಹುಲಿಯೂ ಕಂಡಿಲ್ಲ ಎಂಬ ವ್ಯಂಗ್ಯಕ್ಕೆ ಉತ್ತರ ನೀಡಿದ ಪ್ರತಾಪ್ ಸಿಂಹ, ಮೂರು ಹೆಲಿಕಾಪ್ಟರ್ ಬಂದ ಕಾರಣ ಶಬ್ದದಿಂದ ಕಾಡು ಪ್ರಾಣಿಗಳು ದಟ್ಟ ಅರಣ್ಯದೊಳಗೆ ಹೋಗಿವೆ. ನಿಮಗೆ ಇಷ್ಟು ಲೋಕ ಜ್ಞಾನವಿಲ್ಲವೇ ಎಂದು ಪ್ರಶ್ನಿಸಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read