ಡಿಸಿಎಂ ಹುದ್ದೆ ಸಿಗದಿದ್ದಕ್ಕೆ ಬೇಸರವಿಲ್ಲ- ಪರಮೇಶ್ವರ್

ಬೆಂಗಳೂರು: ಇಂದು ರಾಜ್ಯದ ನೂತನ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ. ನನಗೆ ಡಿಸಿಎಂ ಸ್ಥಾನ ಸಿಕ್ಕಿಲ್ಲ ಎಂದು ಬೇಸರವಿಲ್ಲ ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿ.ಪರಮೇಶ್ವರ್, ಯಾವುದೆ ಗೊಂದಲಗಳೂ ಇಲ್ಲ, ಎಲ್ಲವೂ ಬಗೆಹರಿದಿದೆ ಎಂದು ಹೇಳಿದರು.

ಒಬ್ಬರಿಗೆ ಮಾತ್ರ ಡಿಸಿಎಂ ಸ್ಥಾನ ಎಂದು ಹೈಕಮಾಂಡ್ ಹೇಳಿದೆ. ಸಣ್ಣಪುಟ್ಟ ವ್ಯತ್ಯಾಸ ಬಿಟ್ಟು ಎಲ್ಲರೂ ಒಗ್ಗಟ್ಟಾಗಿ ಹೋಗಬೇಕು ಎಂದು ಸೂಚಿಸಿದ್ದಾರೆ. ಹೈಕಮಾಂಡ್ ನೀಡಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read