ತಾಯಿ ಸಾವಿನಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ಮಗಳು

ಅನಾರೋಗ್ಯದಿಂದ ಬಳಲುತ್ತಿದ್ದ ತನ್ನ ತಾಯಿ ಮೃತಪಟ್ಟ ಸುದ್ದಿ ತಿಳಿದ ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.

ಕಾರ್ಕಳ ತಾಲೂಕಿನ ಈದು ನೂರಾಲ್ ಬೆಟ್ಟುಕಜೆ ಎಂಬಲ್ಲಿ ಈ ಘಟನೆ ನಡೆದಿದ್ದು, 25 ವರ್ಷದ ರೇಖಾ ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ.

ರೇಖಾ ಅವರ ತಾಯಿ ಭಾಗಿ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಮಂಗಳವಾರ ಬೆಳಿಗ್ಗೆ ಮೃತಪಟ್ಟಿದ್ದರು. ಈ ಸಂದರ್ಭದಲ್ಲಿ ರೇಖಾ ಫ್ಯಾನ್ಸಿ ಅಂಗಡಿಯೊಂದಕ್ಕೆ ಕೆಲಸಕ್ಕೆ ಹೋಗಿದ್ದು, ಕರೆ ಮಾಡಿದ ಪರಿಚಿತರೊಬ್ಬರು ನಿಮ್ಮ ತಾಯಿ ಆರೋಗ್ಯ ಬಿಗಡಾಯಿಸಿದೆ ಎಂದು ಹೇಳಿದ್ದರು.

ವಾಪಸ್ ಮನೆಗೆ ಹೊರಟಿದ್ದ ರೇಖಾ ಮೊದಲೇ ಅನಾರೋಗ್ಯದಿಂದ ಬಳಲುತ್ತಿದ್ದ ತನ್ನ ತಾಯಿ ಮೃತಪಟ್ಟಿರಬಹುದು ಎಂಬ ಅನುಮಾನದ ಮೇರೆಗೆ ದಾರಿ ಮಧ್ಯದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read