ದಾವಣಗೆರೆಯಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಪತ್ನಿ ಮತ್ತಾಕೆಯ ಪ್ರಿಯಕರನಿಂದಲೇ ಬರ್ಬರ ಹತ್ಯೆ

ಇತ್ತೀಚೆಗೆ ದಾವಣಗೆರೆಯಲ್ಲಿ ನಡೆದಿದ್ದ ವ್ಯಕ್ತಿಯೊಬ್ಬನ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮೃತ ವ್ಯಕ್ತಿಯು ಪತ್ನಿ ಹಾಗೂ ಆಕೆಯ ಪ್ರಿಯಕರನಿಂದಲೇ ಬರ್ಬರವಾಗಿ ಹತ್ಯೆಯಾಗಿರುವುದು ಪೋಲಿಸ್ ತನಿಖೆಯಲ್ಲಿ ಬೆಳಕಿಗೆ ಬಂದಿದ್ದು, ಈಗ ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದೆ.

ಪ್ರಕರಣದ ವಿವರ: ಇತ್ತೀಚೆಗೆ ದಾವಣಗೆರೆ ನಗರದ ಶಾಮನೂರು ರಸ್ತೆಯ ಬಾರ್ ಒಂದರ ಬಳಿ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಬೈಚವಳ್ಳಿ ಗ್ರಾಮದ ಮಹಾಂತೇಶ್ ಎಂಬಾತನನ್ನು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿತ್ತು. ದಾವಣಗೆರೆಯಲ್ಲಿ ಮದುವೆಯಾಗಿದ್ದ ಮಹಾಂತೇಶ್ ಯುಗಾದಿ ಹಬ್ಬಕ್ಕೆ ಅತ್ತೆ ಮನೆಗೆ ಬಂದಾಗ ಈ ಕೊಲೆ ನಡೆದಿತ್ತು.

ಮದ್ಯಪಾನದ ಚಟ ಹೊಂದಿದ್ದ ಮಹಾಂತೇಶ್ ಹೊರಗಡೆ ಹೋದಾಗ ಈ ಕೊಲೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿದ್ದ ವಿದ್ಯಾನಗರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದರು. ವಿಚಾರಣೆ ವೇಳೆ ಮೃತ ವ್ಯಕ್ತಿಯ ಪತ್ನಿ ಶ್ವೇತಾ ಅನುಮಾನಾಸ್ಪದವಾಗಿ ವರ್ತಿಸಿದ್ದು, ಹೀಗಾಗಿ ಪೊಲೀಸರು ನಿಗಾ ಇಟ್ಟಿದ್ದರು.

ಹೆಚ್ಚಿನ ವಿಚಾರಣೆ ನಡೆಸಿದ ವೇಳೆ ಶ್ವೇತಾ ತನ್ನ ಪ್ರಿಯಕರ ಚಂದ್ರಶೇಖರ್ ಎಂಬಾತನ ಜೊತೆ ಸೇರಿ ಈ ಕೊಲೆ ಮಾಡಿರುವುದು ಬಹಿರಂಗವಾಗಿದೆ. ಕೊಲೆಗೀಡಾದ ಮಹಾಂತೇಶನ ಸ್ನೇಹಿತನಾಗಿದ್ದ ಚಂದ್ರಶೇಖರ್, ಶ್ವೇತಾ ಜೊತೆ ಅನೈತಿಕ ಸಂಬಂಧ ಹೊಂದಿದ್ದು, ತಮ್ಮ ದಾರಿಗೆ ಅಡ್ಡಲಾಗಿದ್ದ ಮಹಾಂತೇಶನನ್ನು ಕೊಲೆ ಮಾಡಿ ಈಗ ಸಿಕ್ಕಿಬಿದ್ದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read