‘ದೇಗುಲ’ ಕ್ಕೆ ಮಾಂಸದ ಹಾರ ನೀಡಿದ್ದ ಆರೋಪಿಗಳು ಕೊನೆಗೂ ಅರೆಸ್ಟ್

ತಿಂಗಳ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕನಸವಾಡಿ ಶನಿ ದೇಗುಲಕ್ಕೆ ಮಾಂಸದ ಹಾರ ನೀಡಿ ಹೋಗಿದ್ದ ಇಬ್ಬರು ಆರೋಪಿಗಳನ್ನು ಕೊನೆಗೂ ಬಂಧಿಸಲಾಗಿದೆ. ಈ ಇಬ್ಬರು ಶನಿವಾರದಂದು ಮತ್ತೆ ಹಾರ ತಂದಿದ್ದ ವೇಳೆ ಇವರನ್ನು ಗುರುತಿಸಿದ ದೇಗುಲದ ಸಿಬ್ಬಂದಿ ಹಿಡಿದು ಪೊಲೀಸರ ವಶಕ್ಕೆ ನೀಡಿದ್ದಾರೆ.

ಹೊಸಕೋಟೆ ತಾಲೂಕಿನ ಕಂಬಲಹಳ್ಳಿಯ ರಾಜು ಹಾಗೂ ವೈಟ್ ಫೀಲ್ಡ್ ಮೂಲದ ಆಟೋ ಚಾಲಕ ಸೋಮಶೇಖರ್ ಬಂಧಿತ ಆರೋಪಿಗಳಾಗಿದ್ದು, ಇವರುಗಳು ತಿಂಗಳ ಹಿಂದೆ ಹಾರ ತಂದಿದ್ದ ದೃಶ್ಯಾವಳಿಗಳು ಸಿಸಿ ಟಿವಿಯಲ್ಲಿ ಸೆರೆಯಾಗಿತ್ತು.

ಆ ಸಂದರ್ಭದಲ್ಲಿ ದೇಗುಲದ ಆಡಳಿತ ಮಂಡಳಿ ನೀಡಿದ್ದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದ ದೊಡ್ಡ ಬೆಳವಂಗಲ ಠಾಣೆ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದರೂ ಸುಳಿವು ಸಿಕ್ಕಿರಲಿಲ್ಲ. ಶನಿವಾರದಂದು ಮತ್ತೆ ಹಾರ ನೀಡಲು ಬಂದಿದ್ದ ವೇಳೆ ಇವರನ್ನು ಗುರುತಿಸಿದ ಸಿಬ್ಬಂದಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read