ದೇಶದ ಆರ್ಥಿಕತೆ ಹಾಳು ಮಾಡಿದ್ದೇ ಬಿಜೆಪಿಯವರು; ಜನ ಬದುಕಲಾಗದ ಸ್ಥಿತಿ ನಿರ್ಮಣವಾಗಿದೆ; ಸಿಎಂ ವಾಗ್ದಾಳಿ

ಬೆಂಗಳೂರು: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಸಿಎಂ ಸಿದ್ದರಾಮಯ್ಯ, ದೇಶದ ಆರ್ಥಿಕತೆಯನ್ನು ಹಾಳು ಮಾಡಿದ್ದೇ ಬಿಜೆಪಿಯವರು ಎಂದು ಆರೋಪಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನರೇಂದ್ರ ಮೋದಿಯವರು ಪ್ರಧಾನಿ ಆದ ಮೇಲೆ ಬೆಲೆ ಏರಿಕೆಯಾಯಿತು. ಆರ್ಥಿಕತೆ ಹಾಳಾಗಿದೆ. ಜನರು ಬದುಕಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ ಎಂದರು.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 24 ಪಕ್ಷಗಳು ಮಹಾ ಮೈತ್ರಿಕೂಟ ಸಭೆಯಲ್ಲಿ ಪಾಲ್ಗೊಳ್ಳುತ್ತಿವೆ. ರಾಜ್ಯದಲ್ಲಿ ಬಿಜೆಪಿಯನ್ನು ಸಮರ್ಥವಾಗಿ ಎದುರಿಸಿಲ್ವಾ ? ಅದೇ ರೀತಿ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಒಗ್ಗೂಡಿ ದೇಶದಲ್ಲಿಯೂ ಸಮರ್ಥವಾಗಿ ಎದುರಿಸುತ್ತೇವೆ.

ವಿಧಾನಸಭಾ ಚುನಾವಣೆ ವೇಳೆ ರಾಜ್ಯದಲ್ಲಿ 28 ಕಡೆ ಪ್ರಧಾನಿ ಮೋದಿ ಪ್ರಚಾರ ಮಾಡಿದ್ರು, ಪ್ರಧಾನಿ ಪ್ರಚಾರ ಮಾಡಿದ ಕಡೆಯಲ್ಲೆಲ್ಲಾ ನಾವು ಗೆದ್ದಿದ್ದೇವೆ. ಲೋಕಸಭೆಯಲ್ಲಿ ಬಿಜೆಪಿ ಹಾಗೂ ಮಿತ್ರಪಕ್ಷಗಳು ಸೋಲಲಿವೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read