ದೇಶ ಹಾಗೂ ಕರ್ನಾಟಕದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ; ಕೇಂದ್ರ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿ

ತಮ್ಮ ಪಕ್ಷದ ಅಭ್ಯರ್ಥಿ ಪ್ರಭಾಕರ ರೆಡ್ಡಿ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ ಕುರಿತಂತೆ ಕಿಡಿ ಕಾರಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ಕುಮಾರಸ್ವಾಮಿ, ದೇಶ ಹಾಗೂ ಕರ್ನಾಟಕದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ಹೇಳಿದ್ದಾರೆ.

ಹಾವೇರಿ ಜಿಲ್ಲೆ ರಾಣೆಬೆನ್ನೂರು ಕ್ಷೇತ್ರ ವ್ಯಾಪ್ತಿಯ ಹಲಗೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಚುನಾವಣೆ ನಡೆಯುವ ರಾಜ್ಯಗಳಲ್ಲಿ ಪ್ರತಿಪಕ್ಷಗಳ ನಾಯಕರ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸುವುದು ಮಾಮೂಲಿಯಾಗಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅವರು ಅದನ್ನೇ ಮಾಡಿದ್ದರು ಎಂದರು.

ಇನ್ನು ಮೂರು ತಿಂಗಳಗಳ ಕಾಲ ಇದನ್ನು ಸಹಿಸಿಕೊಳ್ಳಲೇಬೇಕಾಗಿದೆ ಎಂದು ಹೇಳಿದ ಕುಮಾರಸ್ವಾಮಿಯವರು, ಬಿಜೆಪಿಯವರು ಸತ್ಯಹರಿಶ್ಚಂದ್ರರು. ಅವರು ಬಡತನದಲ್ಲಿಯೇ ಚುನಾವಣೆ ನಡೆಸುತ್ತಾರೆ ಎಂದು ವ್ಯಂಗ್ಯವಾಡಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read