ಪದ್ಮಶ್ರೀ ಪುರಸ್ಕೃತ ತುಳಸಿ ಗೌಡ ಹಾಗೂ ಅಬ್ದುಲ್ ಖಾದರ್ ಗೆ ಗೌರವ ಡಾಕ್ಟರೇಟ್

ಧಾರವಾಡ: ಉತ್ತರ ಕನ್ನಡ ಜಿಲ್ಲೆಯ ವೃಕ್ಷಮಾತೆ ಖ್ಯಾತಿಯ ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ಹಾಗೂ ಕೃಷಿ ಉಪಕರಣಗಳ ಸಂಶೋಧಕ ಅಬ್ದುಲ್ ಖಾದರ್ ಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಘೋಷಿಸಿದೆ.

ಧಾರವಾಡ ಕೃಷಿ ವಿಶ್ವ ವಿದ್ಯಾಲಯದ 36ನೇ ಘಟಿಕೋತ್ಸವದಲ್ಲಿ ತುಳಸಿ ಗೌಡ ಹಾಗೂ ಅಬ್ದುಲ್ ಖಾದರ್ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ ಎಂದು ವಿವಿ ತಿಳಿಸಿದೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಳ್ಳಿಯ ತುಳಸಿಗೌಡ ಅವರು ಪ್ರತಿ ವರ್ಷ 30 ಸಾವಿರಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು ಪೋಷಿಸುತ್ತಾರೆ. ಅವರ ಸಾಧನೆಗೆ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರ ಪದ್ಮಶ್ರೀ ಪ್ರಶಸ್ತಿ ಲಭ್ಯವಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read