ಪೋಷಕರೇ ಗಮನಿಸಿ : ನವೋದಯ ವಿದ್ಯಾಲಯದಲ್ಲಿ  6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ತಾಲ್ಲೂಕು ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯ (ಭಾರತ ಸರ್ಕಾರದ ಮಾನವ ಸಂಪನ್ಮೂಲ ಇಲಾಖೆ)ದಲ್ಲಿ 2026-27ನೇ ಸಾಲಿಗೆ 6ನೇ ತರಗತಿಗೆ ಪ್ರವೇಶ ಪಡೆಯಲು ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಗಳ ಮಕ್ಕಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜುಲೈ 29 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಅರ್ಜಿಯನ್ನು https://cbseitms.rcil.gov.in/nvs/Index/Registration ವೆಬ್‍ಸೈಟ್‍ನಲ್ಲಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಜವಾಹರ್ ನವೋದಯ ವಿದ್ಯಾಲಯ ಇರುವ ಜಿಲ್ಲೆಯ ನಿವಾಸಿಯಾಗಿರಬೇಕು. 2025-26ರ ಶೈಕ್ಷಣಿಕ ಅವಧಿಯಲ್ಲಿ 5ನೇ ತರಗತಿಯಲ್ಲಿ ಓದುತ್ತಿರಬೇಕು. ಅಭ್ಯರ್ಥಿಯು 01.05.2014 ರಿಂದ 30.07.2016ರ ನಡುವೆ ಜನಿಸಿರಬೇಕು. 2025ರ ಡಿಸೆಂಬರ್ 13ರಂದು ಪರೀಕ್ಷೆ ನಡೆಯಲಿದೆ ಎಂದು ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯ ಪ್ರಾಂಶುಪಾಲರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read