ಪ್ರಧಾನಿ ಬಳಿಕ ಈಗ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದೆ ಮತ್ತೊಂದು ವಿಮಾನ….!

ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿಯವರು ಶಿವಮೊಗ್ಗ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ್ದು, ಅವರು ಪ್ರಯಾಣಿಸಿದ ವಿಮಾನವೇ ಮೊಟ್ಟ ಮೊದಲ ಬಾರಿಗೆ ನೂತನ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿತ್ತು.

ಅದಾದ ಬಳಿಕ ಮತ್ತೊಂದು ಕಾರ್ಯಕ್ರಮಕ್ಕಾಗಿ ಕರ್ನಾಟಕಕ್ಕೆ ಭೇಟಿ ನೀಡಿದ್ದ ನರೇಂದ್ರ ಮೋದಿಯವರು ವಿಶೇಷ ವಿಮಾನದ ಮೂಲಕ ಶಿವಮೊಗ್ಗ ವಿಮಾನ ನಿಲ್ದಾಣದಿಂದಲೇ ವಾಪಸ್ ದೆಹಲಿಗೆ ತೆರಳಿದ್ದರು.

ಅದಾದ ಬಳಿಕ ಪ್ರಯಾಣಿಕರ ವಿಮಾನ ಸಂಚಾರ ಆರಂಭಕ್ಕೆ ಪ್ರಯತ್ನಗಳು ನಡೆದಿರುವ ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಹುಬ್ಬಳ್ಳಿ ಮೂಲಕ ವಿಶೇಷ ವಿಮಾನದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಹೀಗಾಗಿ ಪ್ರಧಾನಿಯವರ ಬಳಿಕ ಈಗ ಸಿಎಂ ಅವರ ವಿಮಾನ ನೂತನ ನಿಲ್ದಾಣದಲ್ಲಿ ಲ್ಯಾಂಡ್ ಆಗಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read