ಬಿಜೆಪಿ ಅಂದ್ರೇನೆ ಸುಳ್ಳಿನ ಫ್ಯಾಕ್ಟರಿ; ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಗುಡುಗು

ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು ನನ್ನ ಜೀವಮಾನದಲ್ಲೇ ಇಂತಹ ಭ್ರಷ್ಟ ಸರ್ಕಾರ ನೋಡಿರಲಿಲ್ಲ. ಬಿಜೆಪಿ ಅಂದ್ರೇನೆ ಸುಳ್ಳಿನ ಫ್ಯಾಕ್ಟರಿ ಎಂದು ಗುಡುಗಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ, ಅಮಿತ್ ಶಾ, ನಳಿನ್ ಕುಮಾರ್ ಕಟೀಲ್, ಬಸವರಾಜ ಬೊಮ್ಮಾಯಿ ಸೇರಿದಂತೆ ಎಲ್ಲರೂ ಬರೀ ಸುಳ್ಳು ಹೇಳುತ್ತಾರೆ. ನಾವು ಭ್ರಷ್ಟಾಚಾರದ ಆರೋಪ ಮಾಡಿದರೆ ಸಾಕ್ಷಿ ಕೇಳ್ತಾರೆ. ನಿಮ್ಮ ಸರ್ಕಾರದಲ್ಲಿ ಭ್ರಷ್ಟಾಚಾರ ನಡೆದಿಲ್ವಾ ಎಂದು ಪ್ರಶ್ನಿಸುತ್ತಾರೆ ಎಂದರು.

ಶಾಸಕರ ಪುತ್ರ ಈಗ ಜೈಲಿಗೆ ಹೋಗಿರುವುದೇಕೆ ? ಪಿಎಸ್ಐ ನೇಮಕಾತಿ ಹಗರಣದಲ್ಲಿ ಎಡಿಜಿಪಿ ಜೈಲಿಗೆ ಹೋಗಿದ್ದು ಯಾಕೆ ? ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಈಶ್ವರಪ್ಪ ಹೆಸರು ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದ ಸಂದರ್ಭದಲ್ಲಿ ಈಶ್ವರಪ್ಪ ರಾಜೀನಾಮೆ ಕೊಡಬೇಕಾಯಿತು. ಇದಕ್ಕಿಂತ ಬೇರೆ ಸಾಕ್ಷಿ ಬೇಕೆ ಎಂದು ಕೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read