‘ಭಾಗ್ಯಲಕ್ಷ್ಮೀ’ ಫಲಾನುಭವಿಗಳಿಗೆ ಗುಡ್ ನ್ಯೂಸ್ :  ಪರಿಪಕ್ವ ಮೊತ್ತ ಪಡೆಯಲು ಅರ್ಜಿ ಆಹ್ವಾನ

ಧಾರವಾಡ ಶಹರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಗೆ ಒಳಪಡುವ ಭಾಗ್ಯಲಕ್ಷ್ಮೀ ಯೋಜನೆಯ ಫಲಾನುಭವಿಗಳು ಭಾಗ್ಯಲಕ್ಷ್ಮೀ ಯೋಜನೆಯಡಿ ಪರಿಪಕ್ವ ಮೊತ್ತ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಧಾರವಾಡ ತಾಲ್ಲೂಕಿನಲ್ಲಿ 2006-07 ನೇ ಸಾಲಿನಲ್ಲಿ ಜನಿಸಿ, 18 ವರ್ಷ ಪೂರ್ಣಗೊಂಡ ಭಾಗ್ಯಲಕ್ಷ್ಮೀ ಯೋಜನೆಯಡಿ ಪರಿಪಕ್ವ ಮೊತ್ತ ಪಡೆಯುವ ಫಲಾನುಭವಿಗಳು ಅರ್ಜಿ ಪಡೆದು, ಅಗತ್ಯ ದಾಖಲೆಗಳೊಂದಿಗೆ ಅಕ್ಟೋಬರ್ 30, 2025 ರೊಳಗಾಗಿ ಹುಬ್ಬಳ್ಳಿ ಧಾರವಾಡ ಶಹರ ಯೋಜನಾ ವ್ಯಾಪ್ತಿಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗೆ ಖುದ್ದಾಗಿ ಬಂದು ಮೂಲ ದಾಖಲಾತಿಗಳನ್ನು ಸಲ್ಲಿಸಬೇಕು.

ಅವಧಿ ಮುಗಿದ ಮೇಲೆ ಬಂದ ಅರ್ಜಿಗಳನ್ನು ಆನ್‍ಲೈನ್‍ನಲ್ಲಿ ಅಳವಡಿಸಲು ಸಾಧ್ಯವಾಗದ ಕಾರಣ ಪರಿಗಣಿಸುವುದಿಲ್ಲ ಎಂದು ಹುಬ್ಬಳ್ಳಿ ಧಾರವಾಡ ಶಹರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read