ಮಂಗಳೂರಿಗೆ ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಭೇಟಿ

ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಶನಿವಾರದಂದು ಮಂಗಳೂರಿಗೆ ಅಲ್ಪಕಾಲದ ಭೇಟಿ ನೀಡಿದ್ದರು. ಈ ವೇಳೆ ಅಭಿಮಾನಿಗಳು ಅವರ ಭೇಟಿಗೆ ಹಾತೊರೆದರೂ ಅವಕಾಶ ಲಭ್ಯವಾಗಿಲ್ಲ.

ಸೌದಿ ಅರೇಬಿಯಾದಲ್ಲಿ ಆಸ್ಪತ್ರೆ ಹೊಂದಿರುವ ಕಾಸರಗೋಡಿನ ಬೇಕಲದ ಡಾ. ಶಾಜೀರ್ ಗಫರ್, ತಮ್ಮ ತಂದೆ ಪ್ರೊ. ಕೆ.ಕೆ. ಅಬ್ದುಲ್ ಗಫರ್ ಅವರ ಆತ್ಮಚರಿತ್ರೆ ಬಿಡುಗಡೆಗೊಳಿಸುವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಧೋನಿ ಅವರನ್ನು ಆಹ್ವಾನಿಸಿದ್ದು, ಇದರಲ್ಲಿ ಪಾಲ್ಗೊಳ್ಳುವ ಸಲುವಾಗಿ ಅವರು ಬಂದಿದ್ದರು.

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ಶಾಸಕ ಯು.ಟಿ. ಖಾದರ್ ಅವರ ಸಹೋದರ ಡಾ. ಯು.ಟಿ. ಇಫ್ತಿಕಾರ್ ಸ್ವಾಗತಿಸಿದ್ದು, ಬಳಿಕ ಮಹೇಂದ್ರ ಸಿಂಗ್ ಧೋನಿ ವಿಮಾನ ನಿಲ್ದಾಣದಿಂದ ಕಾಸರಗೋಡಿಗೆ ಐಷಾರಾಮಿ ಕಾರಿನಲ್ಲಿ ತೆರಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read