ಮಗನ ಅಗಲಿಕೆ ಸಹಿಸಲಾರದೆ ಮಾರನೆ ದಿನ ಆತ್ಮಹತ್ಯೆಗೆ ಶರಣಾದ ತಂದೆ…!

ಅಪಘಾತದಲ್ಲಿ ತಮ್ಮ ಪುತ್ರ ಸಾವನ್ನಪ್ಪಿದ್ದರಿಂದ ತೀವ್ರವಾಗಿ ಮನನೊಂದ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮದ್ದರಿಕಿ ಗ್ರಾಮದಲ್ಲಿ ನಡೆದಿದೆ.

ಶುಕ್ರವಾರ ಸಂಜೆ ಶಹಾಪುರದಿಂದ ತಮ್ಮ ಗ್ರಾಮಕ್ಕೆ ಮರಳುತ್ತಿದ್ದ 24 ವರ್ಷದ ಶಿವರಾಜ ಬಿರಾದರ್ ಅವರ ಬೈಕಿಗೆ ಕಬ್ಬು ತುಂಬಿದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು.

ಮಗನ ಶವದ ಮುಂದೆ ಕುಳಿತು ರಾತ್ರಿ ಇಡೀ ರೋಧಿಸುತ್ತಿದ್ದ ಬಸವರಾಜ ಬಿರಾದರ್ ಶನಿವಾರ ಬೆಳಿಗ್ಗೆ ನಾಪತ್ತೆಯಾಗಿದ್ದರು. ಅವರಿಗಾಗಿ ಹುಡುಕಾಟ ನಡೆಸಿದ ವೇಳೆ ಊರ ಹೊರ ವಲಯದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read