ಮಗನ ಸಾವಿನ ನೋವಿನಲ್ಲೂ ‘ಅಂಗಾಂಗ’ ದಾನ ಮಾಡುವ ಮೂಲಕ ಸಾರ್ಥಕತೆ ಮೆರೆದ ಕುಟುಂಬ

ತಮ್ಮ ಮಗ ಸಾವನ್ನಪ್ಪಿದ ನೋವಿನಲ್ಲೂ ಸಹ ಕುಟುಂಬವೊಂದು ಅಂಗಾಂಗ ದಾನ ಮಾಡುವ ಮೂಲಕ ಸಾರ್ಥಕತೆ ಮೆರೆದಿರುವ ಘಟನೆ ನಡೆದಿದೆ.

ಕಳೆದ ಶುಕ್ರವಾರ ರಾತ್ರಿ ಮಂಡ್ಯ – ಚಿಕ್ಕ ಮಂಡ್ಯ ನಡುವಿನ ರಸ್ತೆಯಲ್ಲಿ ಬೈಕಿನಿಂದ ಆಯತಪ್ಪಿ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಚಿಕ್ಕ ಮಂಡ್ಯ ನಿವಾಸಿ ಗಿರೀಶ್ ಅಲಿಯಾಸ್ ಸಾಧು ಮಹಾರಾಜ್ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶನಿವಾರದಂದು ಮೃತಪಟ್ಟಿದ್ದರು.

ಈ ಸಂದರ್ಭದಲ್ಲಿ ಮೃತ ಗಿರೀಶ್ ಅಂಗಾಂಗಗಳನ್ನು ಕುಟುಂಬ ಸದಸ್ಯರು ದಾನ ಮಾಡಿದ್ದು, ಹಲವು ರೋಗಿಗಳ ಬಾಳಿಗೆ ಬೆಳಕಾಗಿದ್ದಾರೆ. ಮಗನ ಸಾವಿನ ನೋವಿನಲ್ಲೂ ಆತನ ಅಂಗಾಂಗ ದಾನ ಮಾಡುವ ಮೂಲಕ ಸಾರ್ಥಕತೆ ಮೆರೆದ ಕುಟುಂಬ ಸದಸ್ಯರ ಕುರಿತು ಶ್ಲಾಘನೆ ವ್ಯಕ್ತವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read