ಮಾಡೆಲ್ ವಿದ್ಯಾಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್…!

ಬೆಂಗಳೂರು: ಬೆಂಗಳೂರಿನಲ್ಲಿ ಮಾಡೆಲ್ ವಿದ್ಯಾಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸಾವಿಗೂ ಮುನ್ನ ವಿದ್ಯಾಶ್ರೀ ಬರೆದಿಟ್ಟಿದ್ದ ಡೆತ್ ನೋಟ್ ಪತ್ತೆಯಾಗಿದೆ.

ಮಾಡೆಲಿಂಗ್ ಜೊತೆ ಸಾಫ್ಟ್ ವೇರ್ ಉದ್ಯೋಗಿಯಾಗಿದ್ದ ವಿದ್ಯಾಶ್ರೀ ಜುಲೈ 21ರಂದು ಕೆಂಪಾಪುರ ನಿವಾಸದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ ವಿದ್ಯಾಶ್ರೀ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದ್ದು, ಡೆತ್ ನೋಟ್ ನಲ್ಲಿ ಪ್ರೀತಿಸಿದ ಹುಡುಗನಿಂದ ತನಗಾದ ಮೋಸ, ವಂಚನೆ ಬಗ್ಗೆ ವಿವರಿಸಿದ್ದಾರೆ.

ಫೇಸ್ ಬುಕ್ ನಲ್ಲಿ ಪರಿಚಯನಾದ ಜಿಮ್ ಟ್ರೇನರ್ ಅಕ್ಷಯ್ ಎಂಬಾತ ವಿದ್ಯಾಶ್ರೀಗೆ ಪರಿಚಿತವಾಗಿದ್ದು, ಸ್ನೇಹ, ಪ್ರೀತಿವರೆಗೂ ತಿರುಗಿದೆ. ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದ ಇಬ್ಬರ ಮಧ್ಯೆ ಮೂರು ತಿಂಗಳ ಹಿಂದೆ ಬಿರುಕುಂಟಾಗಿದೆ. ಅಕ್ಷಯ್ ತನ್ನನ್ನು ಮದುವೆಯಾಗುತ್ತಾನೆ ಎಂದು ನಂಬಿದ್ದ ವಿದ್ಯಾಶ್ರೀಗೆ ಆತ ಮೋಸ ಮಾಡಿರುವುದು ಗೊತ್ತಾಗಿದೆ. ಆತನಿಗಾಗಿ ಸಾಕಷ್ಟು ಹಣವನ್ನು ನೀಡಿದ್ದ ವಿದ್ಯಾಶ್ರೀ, ವಾಪಸ್ ಕೇಳಿದಾಗ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದ. ಇದರಿಂದ ಮಾನಸಿಕವಾಗಿ ವಿದ್ಯಾಶ್ರೀ ಕುಗ್ಗಿ ಹೋಗಿದ್ದಳಂತೆ.

ಅಲ್ಲದೇ ಬರ ಬರುತ್ತಾ ಅಕ್ಷಯ್ ಕಿರುಕುಳಕ್ಕೆ ಬೇಸತ್ತಿದ್ದ ವಿದ್ಯಾಶ್ರೀ ಜುಲೈ 21ರಂದು ಆತ್ಮಹತ್ಯೆಗೆ ಶರಣಾಗಿದ್ದಳು. ಇದೀಗ ವಿದ್ಯಾಶ್ರೀ ಪೋಷಕರು ದೂರು ನೀಡಿದ್ದು, ಆರೋಪಿ ಅಕ್ಷಯ್ ವಿರುದ್ಧ ಕಿರುಕುಳ, ಆತ್ಮಹತ್ಯೆ ಪ್ರಚೋದನೆ ಕೇಸ್ ದಾಖಲಿಸಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read