‘ವರ್ಗಾವಣೆ’ ಆತಂಕದಲ್ಲಿದ್ದ ಕಂದಾಯ ಇಲಾಖೆ ಸಿಬ್ಬಂದಿಗೆ ಇಲ್ಲಿದೆ ಗುಡ್ ನ್ಯೂಸ್

ರಾಜ್ಯ ವಿಧಾನಸಭೆಗೆ ಇನ್ನು ಎರಡ್ಮೂರು ತಿಂಗಳಲ್ಲಿ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ಇದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಆದರೆ ಚುನಾವಣಾ ದಿನಾಂಕ ಘೋಷಣೆಯಾದರೆ ನೀತಿ ಸಂಹಿತೆ ಅನುಷ್ಠಾನಗೊಳ್ಳಲಿದೆ ಎಂಬ ಕಾರಣಕ್ಕೆ ಅದಕ್ಕೂ ಮುನ್ನ ಕೆಲವೊಂದು ವರ್ಗಾವಣೆಗಳು ನಡೆಯುತ್ತಿದ್ದು, ಈ ಆತಂಕದಲ್ಲಿದ್ದ ಕಂದಾಯ ಇಲಾಖೆ ಸಿಬ್ಬಂದಿಗೆ ಗುಡ್ ನ್ಯೂಸ್ ಇಲ್ಲಿದೆ.

ಕಂದಾಯ ಇಲಾಖೆ ಅಧಿಕಾರಿ / ನೌಕರರ ವರ್ಗಾವಣೆಗೆ ಸರ್ಕಾರ ಬ್ರೇಕ್ ಹಾಕಿದ್ದು, ಚುನಾವಣಾ ಆಯೋಗದ ಆದೇಶದಂತೆ ಈಗ ಮತದಾರರ ಪಟ್ಟಿಯ ನೋಂದಣಿ, ಪರಿಷ್ಕರಣೆ ಸೇರಿದಂತೆ ಹಲವು ಕಾರ್ಯಗಳು ನಡೆಯುತ್ತಿರುವುದರಿಂದ ವರ್ಗಾವಣೆ ನಡೆದರೆ ಈ ಕೆಲಸಕ್ಕೆ ಅಡಚಣೆ ಉಂಟಾಗುತ್ತದೆ ಎಂಬ ಕಾರಣಕ್ಕೆ ಈ ತೀರ್ಮಾನ ಕೈಗೊಳ್ಳಲಾಗಿದೆ.

ಹೀಗಾಗಿ ತಹಸಿಲ್ದಾರ್, ಉಪ ತಹಶೀಲ್ದಾರ್, ಶಿರಸ್ತೇದಾರ್, ಕಂದಾಯ ನಿರೀಕ್ಷಕರು, ರಾಜಸ್ವ ನಿರೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳ ನಿಯೋಜನೆ ವರ್ಗಾವಣೆಗೆ ತಡೆ ನೀಡಲಾಗಿದ್ದು, ಮುಖ್ಯಮಂತ್ರಿ, ಕಂದಾಯ ಸಚಿವರಿಂದ ಅನುಮೋದನೆಗೊಂಡಿರುವ ವರ್ಗಾವಣೆ ಅಥವಾ ನಿಯೋಜನೆಗಳನ್ನು ಮಾತ್ರ ಸಲ್ಲಿಸಲು ಸೂಚಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read