ಶಬರಿಮಲೆಗೆ ತೆರಳಿ ಅಯ್ಯಪ್ಪನ ದರ್ಶನ ಪಡೆದ ಗೃಹ ಸಚಿವ ಅರಗ ಜ್ಞಾನೇಂದ್ರ

ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಶಬರಿಮಲೈಗೆ ತೆರಳಿ ಸ್ವಾಮಿ ಅಯ್ಯಪ್ಪನ ದರ್ಶನ ಪಡೆದಿದ್ದಾರೆ. ಸೋಮವಾರದಂದು ಬೆಂಗಳೂರಿನಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಅವರು ವಿಮಾನದ ಮೂಲಕ ಕೊಚ್ಚಿಗೆ ತೆರಳಿ ಅಲ್ಲಿಂದ ವಾಹನದ ಮೂಲಕ ಪಂಪ ತಲುಪಿದ್ದರು.

ಪಂಪದಿಂದ ಎಂಟು ಕಿಲೋಮೀಟರ್ ಕಾಲ್ನಡಿಗೆಯಲ್ಲಿಯೇ ತೆರಳಿದ ಅರಗ ಜ್ಞಾನೇಂದ್ರ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಅವರೊಂದಿಗೆ ತೀರ್ಥಹಳ್ಳಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಪ್ರಶಾಂತ್ ಕುಕ್ಕೆ, ಹುಂಚದಕಟ್ಟೆ ಗ್ರಾಮ ಪಂಚಾಯತಿ ಅಧ್ಯಕ್ಷ ರಾಘವೇಂದ್ರ ಮೊದಲಾದವರಿದ್ದರು.

ಮಕರ ಜ್ಯೋತಿ ಸಂದರ್ಭದಲ್ಲಿ ಜನಸಂದಣಿ ಜಾಸ್ತಿ ಇರುತ್ತದೆ ಎಂಬ ಕಾರಣಕ್ಕಾಗಿ ಆ ಬಳಿಕವೇ ಗೃಹ ಸಚಿವ ಅರಗ ಜ್ಞಾನೇಂದ್ರ ಶಬರಿಮಲೈಗೆ ಭೇಟಿ ನೀಡಿದ್ದು, ಕೇರಳ ಸರ್ಕಾರದ ಸಚಿವರಿಗೆ ಮೊದಲೇ ಮಾಹಿತಿ ನೀಡಿದ್ದ ಕಾರಣ ವಿಶೇಷ ಭದ್ರತೆ ಒದಗಿಸಲಾಗಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read