ಶ್ರೀರಾಮ ನವಮಿ ಪ್ರಯುಕ್ತ ಇಂದು ಪ್ರಾಣಿ ವಧೆ – ಮಾಂಸ ಮಾರಾಟ ನಿಷೇಧ

ರಾಜ್ಯದಾದ್ಯಂತ ಇಂದು ಸಡಗರ ಸಂಭ್ರಮದಿಂದ ಶ್ರೀ ರಾಮನವಮಿ ಆಚರಿಸಲಾಗುತ್ತಿದ್ದು, ಹಬ್ಬದ ಪ್ರಯುಕ್ತ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕೆಲವು ನಗರಗಳಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧ ಮಾಡಲಾಗಿದೆ.

ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ – ಮಾಂಸ ಮಾರಾಟ ನಿಷೇಧಿಸಲಾಗಿದ್ದು, ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲೂ ನಿಷೇಧ ವಿಧಿಸಲಾಗಿದೆ.

ಮಾಂಸ ಮಾರಾಟಗಾರರು ಈ ಸಂದರ್ಭದಲ್ಲಿ ಆದೇಶವನ್ನು ಪಾಲಿಸಬೇಕು ಎಂದು ಸೂಚಿಸಲಾಗಿದ್ದು, ಒಂದೊಮ್ಮೆ ಇದನ್ನು ಉಲ್ಲಂಘಿಸಿದರೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read