ಬೆಂಗಳೂರು: ಚುನಾವಣಾ ಅಕ್ರಮ ಖಂಡಿಸಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದು, ರಾಹುಲ್ ಗಾಂಧಿಯವರಿಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವರಮಹಾಲಕ್ಷ್ಮೀ ಹಬ್ಬದ ಶುಭ ಕೋರೊದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ನಿಖಿಲ್, ರಾಹುಲ್ ಗಾಂಧಿ ಅವರೇ, ನಮ್ಮ ಕರ್ನಾಟಕಕ್ಕೆ ಸ್ವಾಗತ. ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು. ಕಳೆದ 3 ವರ್ಷದಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ 3 ಲಕ್ಷ ಕೋಟಿ ರೂ ಸಾಲ ಮಾಡಿದೆ. ರಾಜ್ಯದ GSDPಯಲ್ಲಿ ಸಾಲದ ಪ್ರಮಾಣ 24.91% ಆಗಿದೆ ಎಂದಿದ್ದಾರೆ.
ನಿಮ್ಮ ಗ್ಯಾರಂಟಿ ಯೋಜನೆಗೆ ಪ್ರತಿ ವರ್ಷ ಬೇಕಾಗಿರುವುದು 55 ಸಾವಿರ ಕೋಟಿ ರೂ, ಕಳೆದ 3 ವರ್ಷದಿಂದ ನಿಮ್ಮ ಸರ್ಕಾರ ಮಾಡುತ್ತಿರುವ ಸಾಲ ವರ್ಷಕ್ಕೆ 1 ಲಕ್ಷ ಕೋಟಿ ರೂ. ನಿಮ್ಮ ಶಾಸಕರೇ ಅಭಿವೃದ್ಧಿಗೆ ಹಣವಿಲ್ಲ ಎಂದು ಹೇಳುತ್ತಿದ್ದಾರೆ. ತಾಯಿ ಮಹಾಲಕ್ಷ್ಮಿಯು ಹಣಕಾಸು ಸಂಕಷ್ಟದಲ್ಲಿರುವ ರಾಜ್ಯ ಸರ್ಕಾರಕ್ಕೆ ಸರ್ವಐಶ್ವರ್ಯ ಪ್ರಾಪ್ತಿಸಲಿ ಎಂದು ಪ್ರಾರ್ಥನೆ ಮಾಡೋಣ ಎಂದಿದ್ದಾರೆ.