ಸಹೋದರನ ಜೊತೆ ಚಿಕ್ಕಬಳ್ಳಾಪುರದ ಆದಿಯೋಗಿ ಪ್ರತಿಮೆ ದರ್ಶನ ಪಡೆದ ‘ಸೂಪರ್ ಸ್ಟಾರ್’

ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಶಿವರಾತ್ರಿ ಮುನ್ನಾ ದಿನ ಅಂದರೆ ಶುಕ್ರವಾರದಂದು ತಮ್ಮ ಸಹೋದರನ ಜೊತೆ ಚಿಕ್ಕಬಳ್ಳಾಪುರದಲ್ಲಿ ಸ್ಥಾಪಿಸಿರುವ 112 ಅಡಿ ಎತ್ತರದ ಆದಿ ಯೋಗಿ ಪ್ರತಿಮೆಯ ದರ್ಶನ ಪಡೆದಿದ್ದಾರೆ.

ಸದ್ಗುರು ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಶನ್ ವತಿಯಿಂದ ಚಿಕ್ಕಬಳ್ಳಾಪುರದ ಅವಲಗುರ್ಕಿ ಬಳಿ ಆದಿ ಯೋಗಿ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲೋಕಾರ್ಪಣೆ ಮಾಡಿದ್ದರು.

ತಮ್ಮ ಸಹೋದರನ ಜೊತೆ ಜನಸಾಮಾನ್ಯರಂತೆ ಬಂದ ಸೂಪರ್ ಸ್ಟಾರ್ ರಜನಿಕಾಂತ್ ಶುಕ್ರವಾರದಂದು ಪ್ರತಿಮೆಯ ದರ್ಶನ ಪಡೆದಿದ್ದು, ಅವರು ವಾಪಸ್ ಆಗುವ ಸಂದರ್ಭದಲ್ಲಿ ಸ್ಥಳೀಯರು ಗುರುತಿಸಿ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

ರಜನಿಕಾಂತ್ ತಮ್ಮ ಮುಂಬರುವ ಚಿತ್ರ ‘ಜೈಲರ್’ ಚಿತ್ರೀಕರಣಕ್ಕಾಗಿ ಇತ್ತೀಚೆಗೆ ಮಂಗಳೂರಿಗೆ ಬಂದಿದ್ದು, ವಾಪಸ್ ಚೆನ್ನೈಗೆ ತೆರಳುವ ವೇಳೆ ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡಿದ್ದರು ಎನ್ನಲಾಗಿದೆ. ಜೈಲರ್ ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಸಾಧುಕೋಕಿಲ ಮೊದಲಾದವರು ಸಹ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read