ಹುಬ್ಬಳ್ಳಿ-ಧಾರವಾಡ ನಡುವೆ ಲಘು ರೈಲು ಸಂಚಾರ; ದೇಶದಲ್ಲೇ ಮೊದಲ ಯೋಜನೆ ಶೀಘ್ರದಲ್ಲೇ ಆರಂಭ

ಹುಬ್ಬಳ್ಳಿ: ಹುಬಳ್ಳಿ ಧಾರವಾಡ ಅವಳಿ ನಗರಗಳ ನಡುವೆ ದಿನದಿಂದ ದಿನಕ್ಕೆ ವಾಹನ ದಟ್ಟಣೆ ಹೆಚ್ಚುತ್ತಿದ್ದು, ಜನರ ಓಡಾಟವೂ ಹೆಚ್ಚಾಗುತ್ತಿದೆ. ಈ ಸಮಸ್ಯೆ ನೀಗಿಸಲು ಸರ್ಕಾರ ಹೊಸ ಯೋಜನೆ ಜಾರಿಗೆ ತರಲು ಮುಂದಾಗಿದೆ.

ಹುಬ್ಬಳ್ಳಿ-ಧಾರವಾಡ ನಗರಗಳ ನಡುವೆ ಲಘು ರೈಲು ಸಂಚಾರಕ್ಕೆ ಯೋಜನೆ ರೂಪಿಸಲಾಗಿದೆ. ಈ ಯೋಜನೆ ದೇಶದಲ್ಲಿಯೇ ಮೊದಲ ಯೋಜನೆಯಾಗಿದ್ದು, ಶೀಘ್ರದಲ್ಲಿಯೇ ಕಾರ್ಯರೂಪಕ್ಕೆ ಬರಲಿದೆ.

ಈಗಾಗಲೇ ಹುಬ್ಬಳ್ಳಿ-ಧಾರವಾಡ ನಡುವೆ ಬಿ ಆರ್ ಟಿ ಎಸ್ ಬಸ್ ಗಳು ಸಂಚರಿಸುತ್ತಿವೆ. ಇವುಗಳ ಜೊತೆಗೆ ಜನರ ಅನುಕೂಲಕ್ಕಾಗಿ ಹಾಗೂ ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಲಘು ರೈಲು ಸಂಚಾರ ಆರಂಭಿಸಲು ಯೋಜನೆ ರೂಪಿಸಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್, ಲಘು ರೈಲು ಸಾರಿಗೆ ಯೋಜನೆ ಬಗ್ಗೆ ಕಾರ್ಯತಂತ್ರ ರೂಪಿಸಲಾಗಿದ್ದು, ನಾಲ್ಕು ವಾರಗಳಲ್ಲಿ ಪ್ರಸ್ತಾವನೆ ಸಿದ್ಧವಾಗಲಿದೆ. ಸಾರ್ವಜನಿಕ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ-ಪಿಪಿಪಿ ಮಾದರಯಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲಾಗುವುದು. ಅಂದುಕೊಂಡಂತೆ ಆದರೆ ಕೇವಲ ಒಂದುವರೆ ವರ್ಷದಲ್ಲಿ ಈ ಯೋಜನೆ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು ಬಳಿಕ ಜನರು ವಾಸ್ತವ್ಯಕ್ಕಾಗಿ ಹಾಗೂ ಕೈಗಾರಿಕಾ ಉದ್ದೇಶಗಳಿಗಾಗಿ ಹುಬ್ಬಳ್ಳಿ-ಧಾರವಾಡ ಆಯ್ಕೆ ಮಾಡಿಕೊಳ್ಳುತ್ತಾರೆ. ಅವಳಿನಗರ ಮುಂದಿನ ಹತ್ತು ವರ್ಷಗಳಲ್ಲಿ ವೇಗವಾಗಿ ಬೆಳೆಯಲಿದೆ. ಹೀಗಾಗಿ ಅಭಿವೃದ್ಧಿ ದೃಷ್ಟಿಯಿಂದ ಇಂತದ್ದೊಂದು ಮಹತ್ವದ ಯೋಜನೆ ಜಾರಿಗೊಳಿಸುವ ಅಗತ್ಯವಿದೆ ಎಂದು ವರದಿಯನ್ನೂ ಸಲ್ಲಿಸಲಾಗಿದೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read