ಮದುವೆ ಸಂಭ್ರಮದಲ್ಲಿದ್ದವರಿಗೆ ಬಿಗ್ ಶಾಕ್: ಪುತ್ರಿ ಮದುವೆಗೆ 10 ದಿನ ಇರುವಾಗ ಭಾವಿ ಅಳಿಯನೊಂದಿಗೆ ಪರಾರಿಯಾದ ಅತ್ತೆ

ಅಲಿಗಢ: ಮಗಳ ಮದುವೆಗೆ 10 ದಿನಗಳ ಮೊದಲು ಉತ್ತರ ಪ್ರದೇಶದ ಮಹಿಳೆ ಭಾವಿ ಅಳಿಯನೊಂದಿಗೆ ಓಡಿಹೋಗಿದ್ದಾಳೆ.

ಶಿವಾನಿ 10 ದಿನಗಳಲ್ಲಿ ಮದುವೆಯಾಗಬೇಕಿತ್ತು. ಆಮಂತ್ರಣ ಪತ್ರಿಕೆಗಳನ್ನು ಮುದ್ರಿಸಲಾಗಿತ್ತು ಮತ್ತು ಸಂಬಂಧಿಕರನ್ನು ಆಹ್ವಾನಿಸಲಾಗಿತ್ತು. ನಂತರ ಶಿವಾನಿ ಮತ್ತು ಅವಳ ಇಡೀ ಕುಟುಂಬವನ್ನು ದಿಗ್ಭ್ರಮೆಗೊಳಿಸುವ ಘಟನೆ ನಡೆದಿದೆ. ಆಕೆಯ ತಾಯಿ ತನ್ನ ಭಾವಿ ಅಳಿಯನೊಂದಿಗೆ ಓಡಿಹೋಗಿದ್ದಾಳೆ,

ಉತ್ತರ ಪ್ರದೇಶದ ಅಲಿಗಢದ ಮದ್ರಾಕ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯ ವಧುವಿನ ತಾಯಿ ಅನಿತಾ, ತನ್ನ ಭಾವಿ ಪತಿಯೊಂದಿಗೆ ಓಡಿಹೋಗಿದ್ದಲ್ಲದೆ, ಮನೆಯಲ್ಲಿದ್ದ 3.5 ಲಕ್ಷ ರೂ.ಗಳಿಗೂ ಹೆಚ್ಚು ನಗದು ಮತ್ತು 5 ಲಕ್ಷ ರೂ.ಗಳಿಗೂ ಹೆಚ್ಚು ಮೌಲ್ಯದ ಆಭರಣಗಳನ್ನು ಸಹ ತೆಗೆದುಕೊಂಡು ಹೋಗಿದ್ದಾಳೆ ಎಂದು ಹೇಳಿದ್ದಾರೆ.

ನಾನು ಏಪ್ರಿಲ್ 16 ರಂದು ರಾಹುಲ್‌ನನ್ನು ಮದುವೆಯಾಗಬೇಕಿತ್ತು, ಮತ್ತು ನನ್ನ ತಾಯಿ ಭಾನುವಾರ ಅವನೊಂದಿಗೆ ಓಡಿಹೋದರು. ರಾಹುಲ್ ಮತ್ತು ನನ್ನ ತಾಯಿ ಕಳೆದ ಮೂರು ನಾಲ್ಕು ತಿಂಗಳುಗಳಿಂದ ಫೋನ್‌ನಲ್ಲಿ ಸಾಕಷ್ಟು ಮಾತನಾಡುತ್ತಿದ್ದರು. ನಮ್ಮ ಅಲ್ಮಿರಾದಲ್ಲಿ 3.5 ಲಕ್ಷ ರೂ. ನಗದು ಮತ್ತು 5 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ಆಭರಣಗಳಿದ್ದವು. ನನ್ನ ತಾಯಿ ನಮ್ಮ ಎಲ್ಲಾ ಹಣವನ್ನು ತೆಗೆದುಕೊಂಡಿದ್ದಾಳೆ ಎಂದು ಶಿವಾನಿ ಹೇಳಿದ್ದಾಳೆ.

ಶಿವಾನಿಯ ತಂದೆ ಜಿತೇಂದ್ರ ಕುಮಾರ್, ಅವರು ಬೆಂಗಳೂರಿನಲ್ಲಿ ವ್ಯವಹಾರ ನಡೆಸುತ್ತಿದ್ದಾರೆ. ಆ ವ್ಯಕ್ತಿ ನನ್ನ ಮಗಳ ಜೊತೆ ಮಾತನಾಡುತ್ತಿರಲಿಲ್ಲ, ಆದರೆ ನನ್ನ ಹೆಂಡತಿ ಜೊತೆ ಮಾತನಾಡುತ್ತಲೇ ಇರುತ್ತಿದ್ದ. ನಾನು ಬೆಂಗಳೂರಿನಲ್ಲಿ ವಾಸಿಸುತ್ತಾ ನನ್ನ ವ್ಯವಹಾರವನ್ನು ನಡೆಸುತ್ತಿದ್ದೆ. ಕಳೆದ ಮೂರು ತಿಂಗಳಿನಿಂದ ಅವರು ದಿನಕ್ಕೆ 22 ಗಂಟೆಗಳ ಕಾಲ ಪರಸ್ಪರ ಮಾತನಾಡುತ್ತಿದ್ದರು ಎಂದು ನಾನು ಕೇಳಿದ್ದೆ. ನನಗೆ ಅನುಮಾನವಿತ್ತು. ಆದರೆ ಮದುವೆ ಹತ್ತಿರದಲ್ಲಿದ್ದರಿಂದ ಏನನ್ನೂ ಹೇಳಲಿಲ್ಲ. ಏಪ್ರಿಲ್ 6 ರಂದು ಅನಿತಾ ನಮ್ಮ ಎಲ್ಲಾ ನಗದು ಮತ್ತು ಆಭರಣಗಳನ್ನು ತೆಗೆದುಕೊಂಡು ಆ ವ್ಯಕ್ತಿಯೊಂದಿಗೆ ಹೊರಟುಹೋಗಿ ಎಂದು ಹೇಳಿದ್ದಾರೆ.

ಜಿತೇಂದ್ರ ಕುಮಾರ್ ನಾಪತ್ತೆ ಬಗ್ಗೆ ದೂರು ದಾಖಲಿಸಿದ್ದಾರೆ. ಶೀಘ್ರದಲ್ಲೇ ಅನಿತಾ ಮತ್ತು ರಾಹುಲ್ ಅವರನ್ನು ಪತ್ತೆಹಚ್ಚಲು ಸಾಧ್ಯವಾಗುತ್ತದೆ. ನಾವು ಪ್ರಕರಣ ದಾಖಲಿಸಿದ್ದೇವೆ ಮತ್ತು ತನಿಖೆ ಪ್ರಾರಂಭಿಸಿದ್ದೇವೆ. ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮದ್ರಾಕ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read