ಶ್ರೀನಗರ: ಭಾನುವಾರ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ದೇಗುಲದಿಂದ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ನ ಮೇಲೆ ಶಂಕಿತ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ದಾಳಿಯ ನಂತರ ಬಸ್ ಕಮರಿಗೆ ಉರುಳಿದೆ. 10 ಜನರು ಸಾವನ್ನಪ್ಪಿದ್ದಾರೆ ಮತ್ತು 33 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮತ್ತು ಅಧಿಕಾರಿಗಳು ತಿಳಿಸಿದ್ದಾರೆ.
ರಿಯಾಸಿಯ ಶಿವ ಖೋರಿ ದೇವಸ್ಥಾನದಿಂದ ಕತ್ರಾಗೆ ಹಿಂತಿರುಗುತ್ತಿದ್ದ ಬಸ್ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದಾಗ ಸಂಜೆ 6:10 ಕ್ಕೆ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳೀಯ ಗ್ರಾಮಸ್ಥರ ಸಹಾಯದಿಂದ ಪೊಲೀಸರು ರಾತ್ರಿ 8:10 ರ ವೇಳೆಗೆ ಎಲ್ಲಾ ಪ್ರಯಾಣಿಕರನ್ನು ಸ್ಥಳಾಂತರಿಸಿದರು. ಪೊಲೀಸ್ ವರಿಷ್ಠಾಧಿಕಾರಿ(ಎಸ್ಪಿ) ರಿಯಾಸಿ ಅವರು ಸ್ಥಳಾಂತರದ ಮೇಲ್ವಿಚಾರಣೆಯನ್ನು ನಡೆಸಿದ್ದು, ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.
ಗುಂಡಿನ ದಾಳಿಯಿಂದಾಗಿ ಚಾಲಕ ಬಸ್ನ ಬ್ಯಾಲೆನ್ಸ್ ಕಳೆದುಕೊಂಡು ಕಮರಿಗೆ ಬಿದ್ದಿದ್ದಾನೆ. ಪ್ರಯಾಣಿಕರು ಸ್ಥಳೀಯರಲ್ಲ ಮತ್ತು ಅವರ ಗುರುತನ್ನು ಇನ್ನೂ ದೃಢೀಕರಿಸಲಾಗಿಲ್ಲ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ(ಎಸ್ಎಸ್ಪಿ) ರಿಯಾಸಿ ಮೋಹಿತಾ ಶರ್ಮಾ ಹೇಳಿದ್ದಾರೆ.
ಭಯೋತ್ಪಾದಕರು ರಾಜೌರಿ, ಪೂಂಚ್ ಮತ್ತು ರಿಯಾಸಿಯ ಮೇಲ್ಭಾಗದಲ್ಲಿ ಅಡಗಿಕೊಂಡಿದ್ದಾರೆ ಎಂದು ನಂಬಲಾಗಿದೆ.
ಶಿವ್ ಖೋರಿಯಿಂದ ಕತ್ರಾಕ್ಕೆ ಹೋಗುತ್ತಿದ್ದ ಪ್ರಯಾಣಿಕರ ಬಸ್ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿಯಿಂದಾಗಿ ಬಸ್ ಚಾಲಕ ಬಸ್ನ ಸಮತೋಲನವನ್ನು ಕಳೆದುಕೊಂಡು ಕಂದಕಕ್ಕೆ ಬಿದ್ದಿದ್ದಾನೆ. ಘಟನೆಯಲ್ಲಿ 33 ಜನರು ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಎಂದು ಎಸ್ಎಸ್ಪಿ ಶರ್ಮಾ ತಿಳಿಸಿದರು.
ಉಗ್ರರ ದಾಳಿಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಒಮರ್ ಅಬ್ದುಲ್ಲಾ ಖಂಡಿಸಿದ್ದಾರೆ.
https://twitter.com/ANI/status/1799830785484099620
https://twitter.com/ANI/status/1799833546070405434
https://twitter.com/ANI/status/1799830116618346759