ಛತ್ತೀಸ್ಗಢದ ಧಮ್ತಾರಿ ಜಿಲ್ಲೆಯಲ್ಲಿ ಬುಧವಾರ ಟ್ರಕ್ – ಬೊಲೆರೋ ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ 11 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ರಸ್ತೆ ಅಪಘಾತದಲ್ಲಿ ಮಗು ಸೇರಿದಂತೆ ಹಲವರು ಗಾಯಗೊಂಡಿದ್ದು, ಅಪ್ರಾಪ್ತರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜಗತ್ರಾ ಬಳಿಯ ಕಂಕೇರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿಕ್ಕಿ ಸಂಭವಿಸಿದೆ. ದುರಂತ ಸಂಭವಿಸಿದಾಗ ಕುಟುಂಬವು ಸೋರಂನಿಂದ ಮರ್ಕಟೋಲಾಗೆ ಹೋಗುತ್ತಿತ್ತು ಎಂದು ಹೇಳಲಾಗಿದೆ.
ಬಲೋದ್ ಎಸ್ಪಿ ಜಿತೇಂದ್ರ ಕುಮಾರ್ ಯಾದವ್, ಬಲೋದ್ ಜಿಲ್ಲೆಯ ಜಾಗತ್ರಾ ಬಳಿ ಟ್ರಕ್ ಮತ್ತು ಕಾರ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. 11 ಮಂದಿ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ರಾಯ್ಪುರಕ್ಕೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.
ಅಪಘಾತ ಸಂಭವಿಸಿದ ಕೆಲವೇ ಹೊತ್ತಿನಲ್ಲಿ ಪುರೂರು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಛತ್ತೀಸ್ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಪ್ರಾಣಹಾನಿಯ ಬಗ್ಗೆ ದುಃಖ ವ್ಯಕ್ತಪಡಿಸಿ ಸಂತಾಪ ಸೂಚಿಸಿದ್ದಾರೆ.
Chhattisgarh |10 killed and one child seriously injured after a truck and car collided near Jagatra in Balod district. The injured has been referred to Raipur for better treatment. Search for the driver of the truck underway: Jitendra Kumar Yadav, SP Balod pic.twitter.com/imklW8bqlP
— ANI MP/CG/Rajasthan (@ANI_MP_CG_RJ) May 3, 2023