ಬೆಂಗಳೂರು : ವಸತಿ ಹಂಚಿಕೆಯಲ್ಲಿ ಮುಸಲ್ಮಾನರಿಗೆ 15% ಮೀಸಲಾತಿ ನೀಡಿದ್ದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ಧಾಳಿ ನಡೆಸಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರ ವಸತಿ ಇಲಾಖೆಯ ವಸತಿ ಹಂಚಿಕೆಯಲ್ಲಿ ಮುಸಲ್ಮಾನರಿಗೆ 15% ಮೀಸಲಾತಿ ನೀಡಲು ನಿರ್ಧರಿಸಿರುವುದು ಅಸಂವಿಧಾನಿಕ ನಡೆಯಾಗಿದೆ. ಸರ್ಕಾರದ ಈ ನಿರ್ಧಾರದಿಂದಾಗಿ ಇತರೆ ವರ್ಗ, ಸಮುದಾಯಗಳಿಗೆ ಅನ್ಯಾಯವಾಗಲಿದೆ. ಕಾಂಗ್ರೆಸ್ ಸರ್ಕಾರದ ಈ ನಡೆಯ ವಿರುದ್ಧ ನಾವು ಕಾನೂನು ಹೋರಾಟ ನಡೆಸುವ ಬಗ್ಗೆ ಚಿಂತನೆ ನಡೆಸುತ್ತೇವೆ ಎಂದಿದೆ.
ಭಂಡ ಹಾಗೂ ಭ್ರಷ್ಟರ ಓಲೈಕೆ ರಾಜಕಾರಣದ ಪರಾಕಾಷ್ಠೆ!!#CongressFailsKarnataka pic.twitter.com/LcdqkQg1pR
— BJP Karnataka (@BJP4Karnataka) June 20, 2025
ಸಂವಿಧಾನಕ್ಕೆ ಅಪಚಾರ ಬಗೆಯಲು ಸದಾ ಸಿದ್ದ @INCKarnataka ಸರ್ಕಾರ!! ಧರ್ಮಾಧಾರಿತವಾಗಿ ಮೀಸಲಾತಿ ನೀಡಬಾರದು ಎಂದು ಸಂವಿಧಾನದಲ್ಲಿ ಸ್ಪಷ್ಟವಾಗಿ ಹೇಳಿದ್ದರೂ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅದನ್ನು ಪದೇ ಪದೇ ಉಲ್ಲಂಘಿಸುತ್ತಿದೆ. ವಸತಿ ಯೋಜನೆಯಡಿ ಮುಸ್ಲಿಮರಿಗೆ ಪ್ರತ್ಯೇಕವಾಗಿ 15% ಮೀಸಲಾತಿ ನೀಡಿರುವುದು ಸಂಪೂರ್ಣ ಸಂವಿಧಾನ ವಿರೋಧಿ. ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಲು ಹೋಗಿ ನ್ಯಾಯಾಲಯದಿಂದ ಛೀಮಾರಿ ಹಾಕಿಸಿಕೊಂಡಿರುವ ಕಾಂಗ್ರೆಸ್, ಈ ವಿಷಯದಲ್ಲಿಯೂ ಸಹ ಛೀಮಾರಿ ಹಾಕಿಸಿಕೊಳ್ಳುತ್ತದೆ. ಭಂಡ ಹಾಗೂ ಭ್ರಷ್ಟರ ಓಲೈಕೆ ರಾಜಕಾರಣದ ಪರಾಕಾಷ್ಠೆ ಎಂದು ಬಿಜೆಪಿ ಟ್ವೀಟ್ ನಲ್ಲಿ ಅಸಮಾಧಾನ ಹೊರ ಹಾಕಿದೆ.
ಸಂವಿಧಾನಕ್ಕೆ ಅಪಚಾರ ಬಗೆಯಲು ಸದಾ ಸಿದ್ದ @INCKarnataka ಸರ್ಕಾರ!!
— BJP Karnataka (@BJP4Karnataka) June 19, 2025
ಧರ್ಮಾಧಾರಿತವಾಗಿ ಮೀಸಲಾತಿ ನೀಡಬಾರದು ಎಂದು ಸಂವಿಧಾನದಲ್ಲಿ ಸ್ಪಷ್ಟವಾಗಿ ಹೇಳಿದ್ದರೂ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅದನ್ನು ಪದೇ ಪದೇ ಉಲ್ಲಂಘಿಸುತ್ತಿದೆ.
ವಸತಿ ಯೋಜನೆಯಡಿ ಮುಸ್ಲಿಮರಿಗೆ ಪ್ರತ್ಯೇಕವಾಗಿ 15% ಮೀಸಲಾತಿ ನೀಡಿರುವುದು ಸಂಪೂರ್ಣ ಸಂವಿಧಾನ ವಿರೋಧಿ.… pic.twitter.com/2Cw79PZsVx