BIG NEWS : ವಸತಿ ಹಂಚಿಕೆಯಲ್ಲಿ ಮುಸಲ್ಮಾನರಿಗೆ 15% ಮೀಸಲಾತಿ : ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ಧಾಳಿ

ಬೆಂಗಳೂರು : ವಸತಿ ಹಂಚಿಕೆಯಲ್ಲಿ ಮುಸಲ್ಮಾನರಿಗೆ 15% ಮೀಸಲಾತಿ ನೀಡಿದ್ದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ಧಾಳಿ ನಡೆಸಿದೆ.

ರಾಜ್ಯ ಕಾಂಗ್ರೆಸ್ ಸರ್ಕಾರ ವಸತಿ ಇಲಾಖೆಯ ವಸತಿ ಹಂಚಿಕೆಯಲ್ಲಿ ಮುಸಲ್ಮಾನರಿಗೆ 15% ಮೀಸಲಾತಿ ನೀಡಲು ನಿರ್ಧರಿಸಿರುವುದು ಅಸಂವಿಧಾನಿಕ ನಡೆಯಾಗಿದೆ. ಸರ್ಕಾರದ ಈ ನಿರ್ಧಾರದಿಂದಾಗಿ ಇತರೆ ವರ್ಗ, ಸಮುದಾಯಗಳಿಗೆ ಅನ್ಯಾಯವಾಗಲಿದೆ. ಕಾಂಗ್ರೆಸ್ ಸರ್ಕಾರದ ಈ ನಡೆಯ ವಿರುದ್ಧ ನಾವು ಕಾನೂನು ಹೋರಾಟ ನಡೆಸುವ ಬಗ್ಗೆ ಚಿಂತನೆ ನಡೆಸುತ್ತೇವೆ ಎಂದಿದೆ.

ಸಂವಿಧಾನಕ್ಕೆ ಅಪಚಾರ ಬಗೆಯಲು ಸದಾ ಸಿದ್ದ @INCKarnataka ಸರ್ಕಾರ!! ಧರ್ಮಾಧಾರಿತವಾಗಿ ಮೀಸಲಾತಿ ನೀಡಬಾರದು ಎಂದು ಸಂವಿಧಾನದಲ್ಲಿ ಸ್ಪಷ್ಟವಾಗಿ ಹೇಳಿದ್ದರೂ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅದನ್ನು ಪದೇ ಪದೇ ಉಲ್ಲಂಘಿಸುತ್ತಿದೆ. ವಸತಿ ಯೋಜನೆಯಡಿ ಮುಸ್ಲಿಮರಿಗೆ ಪ್ರತ್ಯೇಕವಾಗಿ 15% ಮೀಸಲಾತಿ ನೀಡಿರುವುದು ಸಂಪೂರ್ಣ ಸಂವಿಧಾನ ವಿರೋಧಿ. ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಲು ಹೋಗಿ ನ್ಯಾಯಾಲಯದಿಂದ ಛೀಮಾರಿ ಹಾಕಿಸಿಕೊಂಡಿರುವ ಕಾಂಗ್ರೆಸ್, ಈ ವಿಷಯದಲ್ಲಿಯೂ ಸಹ ಛೀಮಾರಿ ಹಾಕಿಸಿಕೊಳ್ಳುತ್ತದೆ. ಭಂಡ ಹಾಗೂ ಭ್ರಷ್ಟರ ಓಲೈಕೆ ರಾಜಕಾರಣದ ಪರಾಕಾಷ್ಠೆ ಎಂದು ಬಿಜೆಪಿ ಟ್ವೀಟ್ ನಲ್ಲಿ ಅಸಮಾಧಾನ ಹೊರ ಹಾಕಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read