ಹಾಸನ : ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಆಟೋ ಚಾಲಕರೊಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಸಿದ್ದೇಶ್ವರ ನಗರದ ನಿವಾಸಿ ಆಟೋ ಚಾಲಕ ಗೋವಿಂದ (37) ಎಂದು ಗುರುತಿಸಲಾಗಿದೆ. ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಸಾವಿನ ಸಂಖ್ಯೆ 16 ಕ್ಕೆ ಏರಿಕೆಯಾಗಿದೆ .
ಆಟೋ ಚಲಾಯಿಸಿಕೊಂಡು ಬರುವಾಗ ಗೋವಿಂದ ಅವರಿಗೆ ಎದೆನೋವು ಕಾಣಿಸಿಕೊಂಡಿದೆ, ಕೂಡಲೇ ಅವರು ಆಟೋವನ್ನು ಆಸ್ಪತ್ರೆ ಕಡೆ ತಿರುಗಿಸಿದ್ದಾರೆ. ಆದರೆ ಆಸ್ಪತ್ರೆ ಹೋಗಿದ ಕೆಲವೇ ಕ್ಷಣದಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
You Might Also Like
TAGGED:ಹೃದಯಾಘಾತ