BIG NEWS: ನಿಷೇಧಾಜ್ಞೆ ನಿಯಮ ಉಲ್ಲಂಘನೆ; ಬಿಜೆಪಿ 17 ಕಾರ್ಯಕರ್ತರಿಗೆ ಸಮನ್ಸ್ ಜಾರಿ

ಮಂಡ್ಯ: 2017ರಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ಬೈಕ್ ರ್ಯಾಲಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಬಿಜೆಪಿ ಕಾರ್ಯಕರ್ತರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಪಾಂಡವಪುರ ಜೆ ಎಂ ಎಫ್ ಸಿ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಬಿಜೆಪಿ ಕಾರ್ಯಕರ್ತರು ಅಂದು ನಿಷೇಧಾಜ್ಞೆ ಇದ್ದರೂ ಎಸ್ ಡಿ ಪಿಐ, ಪಿಎಫ್ ಐ ಸಂಘಟನೆಗಳ ವಿರುದ್ಧ ಪ್ರತಿಭಟನೆಗೆ ಮಂಗಳೂರಿಗೆ ಹೊರಟಿದ್ದರು. ಪಾಂಡವಪುರದಲ್ಲಿ ಪ್ರತಿಭಟನಾಕಾರರನ್ನು ತಡೆದಿದ್ದ ಪೊಲೀಸರು ಎಫ್ ಐ ಆರ್ ದಾಖಲಿಸಿ ಚಾರ್ಜ್ ಶೀಟ್ ಸಲ್ಲಿಸಿದ್ದರು.

ಕೋರ್ಟ್ ಗೆ ಹಾಜರಾಗದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಇದೀಗ ಸಮನ್ಸ್ ಜಾರಿ ಮಾಡಲಾಗಿದೆ. ಕಾರ್ಯಕರ್ತರಿಗೆ ಸಮನ್ಸ್ ಜಾರಿ ಬೆನ್ನಲ್ಲೇ ಪೊಲೀಸರ ವಿರುದ್ಧ ಬಿಜೆಪಿ ಕಿಡಿಕಾರಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read